Ad imageAd image

ಪರಿಶಿಷ್ಟ ನಾಯಕರ ವಿರುದ್ಧ ಅವಹೇಳನಕಾರಿ ಬರಹ : ಫೇಸ್ಬುಕ್ ಖಾತೆ ಅಡ್ಮಿನ್ ಅರೆಸ್ಟ್

Bharath Vaibhav
ಪರಿಶಿಷ್ಟ ನಾಯಕರ ವಿರುದ್ಧ ಅವಹೇಳನಕಾರಿ ಬರಹ : ಫೇಸ್ಬುಕ್ ಖಾತೆ ಅಡ್ಮಿನ್ ಅರೆಸ್ಟ್
WhatsApp Group Join Now
Telegram Group Join Now

ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಪರಿಶಿಷ್ಟ ಸಮುದಾಯದ ನಾಯಕರ ವಿರುದ್ಧ ಅವಹೇಳನಕಾರಿ ಬರಹ ಪ್ರಕಟಿಸುತ್ತಿದ್ದ ಫೇಸ್ಬುಕ್ ಖಾತೆ ಅಡ್ಮಿನ್ ಬಂಧಿಸಲಾಗಿದೆ.

‘ಗುಲಾಮರ ಅಪ್ಪ’ ಸಾಮಾಜಿಕ ಜಾಲತಾಣದಲ್ಲಿ ನಾಯಕರನ್ನು ಅವಮಾನಿಸಿ ಬರಹ ಪ್ರಕಟಿಸುತ್ತಿದ್ದ ವ್ಯಕ್ತಿಯನ್ನು ಕಲಬುರ್ಗಿ ಸಬರ್ಬನ್ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.ಬೆಂಗಳೂರಿನ ವಿದ್ಯಾಮಾನ್ಯ ನಗರ ನಿವಾಸಿ ಆನಂದ್ ಅಂಜನಪ್ಪ(40) ಬಂಧಿತ ಆರೋಪಿ.

ಬೆಂಗಳೂರು ಕಂಪನಿಯೊಂದರಲ್ಲಿ ಹಿರಿಯ ಐಟಿ ಎಕ್ಸಿಕ್ಯೂಟಿವ್ ಆಗಿ ಆನಂದ್ ಕೆಲಸ ಮಾಡುತ್ತಿದ್ದು, ‘ಗುಲಾಮರ ಅಪ್ಪ’ ಹೆಸರಲ್ಲಿ ಪರಿಶಿಷ್ಟ ಸಮುದಾಯದ ನಾಯಕರ ಬಗ್ಗೆ ಅವಹೇಳನಕಾರಿ ಬರಹ ಪ್ರಕಟಿಸುತ್ತಿದ್ದ ಬಗ್ಗೆ ದಲಿತ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ ಭಂಡಾರಿ ಕಲಬುರಗಿ ಸಬರ್ಬನ್ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!