ವಿಜಯಪುರ : ವಿಜಯಪುರದ HMK ಕಾರು ಸರ್ವಿಸ್ ಸೆಂಟರ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 50 ರಲ್ಲಿರುವ ಕಾರು ಸರ್ವಿಸ್ ಸೆಂಟರ್ ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಹನುಮಂತ ಕನವಡಿ ಎಂಬವರಿಗೆ ಸೇರಿದ ಕಾರು ಸರ್ವಿಸ್ ಸೆಂಟರ್ ನಲ್ಲಿ ಈ ಘಟನೆ ನಡೆದಿದೆ..
ಕಾರು ಸರ್ವಿಸ್ ಸೆಂಟರ್ ಗೆ ರಿಪೇರಿ ಮತ್ತು ಸರ್ವಿಸ್ಗಾಗಿ ಬಂದಿದ್ದು, ಸುಮಾರು 20 ಕಾರುಗಳು ಸುಟ್ಟು ಭಸ್ಮವಾಗಿದ್ದು 1 ಕೋಟಿಗೂ ಅಧಿಕ ನಷ್ಟವಾಗಿದೆ.
ಅಗ್ನಿ ದುರಂತಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಅಂಗಡಿಯಲ್ಲಿದ್ದ 35 ಲಕ್ಷ ಮೌಲ್ಯದ ಕಾರಿನ ಬಿಡಿ ಭಾಗಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಘಟನೆ ಕುರಿತಂತೆ ವಿಜಯಪುರದ ಗೋಲಗುಂಬಜ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




