ಧಾರವಾಡ: ಜೆಎಸ್ಎಸ್ ಶಿಕ್ಷಣ ಸಂಸ್ಥೆಯ ಕಾಲೇಜಿನಲ್ಲಿ ಶ್ರೀಗಂಧ ಫೌಂಡೇಶನ್ ಹಾಗೂ ಸಾರಿಗೆ ಇಲಾಖೆಯ ಸಹಯೋಗದೊಂದಿಗೆ ‘ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಮಾಸಾಚರಣೆಯ’ ಸಮಾರೋಪ ಸಮಾರಂಭವನ್ನು ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಘಟಕದ ಆಯುಕ್ತರಾದ ಶ್ರೀ ಎನ್ ಶಶಿಕುಮಾರ್ ಐಪಿಎಸ್ ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಶಾಲಾ ಕಾಲೇಜು ಮತ್ತು ಶಿಕ್ಷಣ ಸಂಸ್ಥೆಯ ವರ್ಗದವರಿಗೆ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮ ಪಾಲನೆ ಕುರಿತು ಸೇರಿದಂತೆ ಪೋಕ್ಸೋ ಕಾಯ್ದೆಯ ಬಗ್ಗೆ ತಿಳುವಳಿಕೆ ಮಾದಕ ವಸ್ತು ಸೇವನೆಯ ದುಷ್ಪರಿಣಾಮಗಳು, ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿ ಅನುಸರಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು ಮತ್ತು ಸೈಬರ್ ಅಪರಾಧದ ವಿಷಯಗಳ ಕುರಿತು ಜಾಗೃತಿಯನ್ನು ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಡಿಸಿಪಿ ರವರಾದ ಶ್ರೀ ರವೀಶ್ ಸಿ ಆರ್ ಕೆ ಎಸ್ ಪಿ ಎಸ್ ರವರು ಹಾಗೂ ಇತರೆ ಹಿರಿಯ ಪೊಲೀಸ್ ಅಧಿಕಾರಿಗಳು ಶಿಕ್ಷಣ ಸಂಸ್ಥೆಯ ಆಡಳಿತ ಮತ್ತು ಬೋಧಕ ವರ್ಗದವರು ಸಾರಿಗೆ ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ವರದಿ: ನಿತೀಶಗೌಡ ತಡಸ ಪಾಟೀಲ್




