Ad imageAd image

ಭೀಕರ ರಸ್ತೆ ಅಪಘಾತ: ಇಡೀ ಕುಟುಂಬ ದಾರುಣ ಅಂತ್ಯ

Bharath Vaibhav
ಭೀಕರ ರಸ್ತೆ ಅಪಘಾತ: ಇಡೀ ಕುಟುಂಬ ದಾರುಣ ಅಂತ್ಯ
WhatsApp Group Join Now
Telegram Group Join Now

ಬೆಳಗಾವಿ : ಜಮಖಂಡಿ- ಮಿರಜ್ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಇಡೀ ಕುಟುಂಬ ದಾರುಣ ಅಂತ್ಯಕಂಡಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ನಡೆದಿದೆ.

ಲಾರಿ ಮತ್ತು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್​​ನಲ್ಲಿದ್ದ ಗಂಡ, ಹೆಂಡ್ತಿ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೈಕ್ ನಲ್ಲಿದ್ದ ಗಿರೇಪ್ಪಾ ಕುಂದ್ರಾಳಿ, ಪತ್ನಿ ಮಂಜುಳಾ ಕುಂದ್ರಾಳಿ(27), ಮಗು ಆರಾಧ್ಯ ಕುಂದ್ರಾಳಿ(7) ಮೃತ ದುರ್ವೈವಿಗಳು. ಮೂವರು ಬೈಕ್ ಮೇಲೆ ಮಹಾರಾಷ್ಟ್ರದ ಮಿರಜ್ ನಿಂದ ಜಮಖಂಡಿಗೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಗಿರೇಪ್ಪಾ, ಮಂಜುಳಾ ಹಾಗೂ ಆರಾಧ್ಯ ಒಂದೇ ಬೈಕ್​​ನಲ್ಲಿ ಮಿರಜ್ ನಿಂದ ಜಮಖಂಡಿಗೆ ಹೋಗುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್​​ನಲ್ಲಿ ಗಂಡ-ಹೆಂಡ್ತಿ ಹಾಗೂ ಮಗಳು ಮೃತಪಟ್ಟಿದ್ದಾರೆ. ಇನ್ನು ಸ್ಥಳಕ್ಕೆ ಹಾರೂಗೇರಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!