ಬೆಂಗಳೂರು: ದಲಿತರಿಗೆ ಸಿಎಂ ಆಗುವ ಅವಕಾಶ ನೀಡಬೇಕು ಎಂಬ ಸಚಿವ ಹೆಚ್.ಸಿ.ಮಹದೇವಪ್ಪ ಅವರ ಹೇಳಿಕೆ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಹದೇವಪ್ಪನವರು ನಮ್ಮ ರಾಷ್ಟ್ರೀಯ ನಾಯಕರು.ಅವರಿಗೆ ಇಲ್ಲಿಂದಲೇ ನಮಸ್ಕರಿಸುತ್ತೇನೆ ಎಂದಿದ್ದಾರೆ.
ಭಾನುವಾರ ಮಡಿಕೇರಿಯಲ್ಲಿ ಮಾತನಾಡಿದ ಮಹದೇವಪ್ಪ, ದಲಿತರು ರಾಜ್ಯದಲ್ಲಿ ಗಣನೀಯ ಪ್ರಮಾಣದಲ್ಲಿ ಇದ್ದಾರೆ. ಸದಾ ಕಾಂಗ್ರೆಸ್ ನೊಂದಿಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಹಾಗಾಗಿ ಅವರಿಗೂ ಸಿಎಂ ಆಗಲು ಅವಕಾಶ ಕೊಡಬೇಕು ಎಂದು ಹೇಳಿದ್ದರು.
ಮಹಾದೇವಪ್ಪನವರ ಈ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಅವರು ನಮ್ಮ ರಾಷ್ಟ್ರೀಯ ನಾಯಕರು. ಅವರಿಗೆ ನಾನು ಇಲಿಂದಲೇ ನಮಸ್ಕಾರ ಮಾಡುತ್ತೇನೆ ಎನ್ನುತ್ತಾ ತಲೆಬಾಗಿ ನಮಸ್ಕರಿಸಿದರು.




