Ad imageAd image

ಸಾಲಭಾದೇ ತಳಲಾರದೆ ಕೆರೆಗೆ ಹಾರಿ ರೈತ ಆತ್ಮಹತ್ಯೆ 

Bharath Vaibhav
ಸಾಲಭಾದೇ ತಳಲಾರದೆ ಕೆರೆಗೆ ಹಾರಿ ರೈತ ಆತ್ಮಹತ್ಯೆ 
WhatsApp Group Join Now
Telegram Group Join Now

ರಾಯಚೂರು : ರಾಜ್ಯದಲ್ಲಿ ಸಾಲಭಾದೇ ತಳಲಾರದೆ ರೈತರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಭಾದೆ ತಾಳಲಾರದೇ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ ರೌಡಕುಂದಾ ಗ್ರಾಮದಲ್ಲಿ ಜರುಗಿದೆ.

ಜಿಲ್ಲೆಯ ಸಿಂಧನೂರು ತಾಲೂಕಿನ ರೌಡಕುಂದಾ ಗ್ರಾಮದ ಬಳಿ ಕೆರೆಯಲ್ಲಿ ಭಾನುವಾರ ಈ ಘಟನೆ ನಡೆದಿದೆ.ರೈತ ಹನುಮಂತ ವಿರುಪಾಕ್ಷಪ್ಪ ಡಮಾಣಿ (44) ಆತ್ಮಹತ್ಯೆಗೆ ಶರಣಾದ ರೈತ ಎಂದು ತಿಳಿದುಬಂದಿದೆ. ಗ್ರಾಮದ ಪಕ್ಕದಲ್ಲಿರುವ ಕೆರೆಗೆ ಹಾರಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ರೈತನಿಗೆ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಲ್ಲಿ ಸುಮಾರು 10 ಲಕ್ಷ ರೂ ಹಾಗೂ ಖಾಸಗಿಯಾಗಿ 10 ರಿಂದ 12 ಲಕ್ಷ ರೂ.ಗಳ ಸಾಲ ಇತ್ತು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಈ ಕುರಿತು ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಂಧನೂರು ಗ್ರಾಮೀಣ ಪೊಲೀಸರು ತಿಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!