ಗದಗ: ಶಾಸಕ ಚಂದ್ರು ಲಮಾಣಿ ಅವರ ಬಂಧನ ವಿರೋಧಿಸಿ ಬುಧವಾರ ನಡೆದ ಪ್ರತಿಭಟನೆಯಲ್ಲಿ ಬೆಳ್ಳಟ್ಟಿ ಗ್ರಾಮದ ಮುಖಂಡ ತಿಮ್ಮರಡ್ಡಿ ಮರಡ್ಡಿ ಅವರು ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ನಿನ್ನೆ ಶಿರಹಟ್ಟಿಯಲ್ಲಿ ಕಾಂಗ್ರೆಸ್ ನಾಯಕರು ಮಾತನಾಡಿದ್ದನ್ನು ನೋಡಿದರೆ ಭೂತದ ಬಾಯಲ್ಲಿ ಭಗವದ್ಗೀತೆ ಬಂದ ಹಾಗೆ ಭಾಸವಾಗುತ್ತದೆ, ಎಂದು ಅವರು ಟೀಕಿಸಿದರು. ನಮ್ಮ ಶಾಸಕರ ಬಗ್ಗೆ ಮಾತನಾಡಲು ನಿಮಗೆ ಯಾವ ನೈತಿಕತೆ ಇದೆ ಎಂದು ನಿಮ್ಮನ್ನು ನೀವೇ ಪ್ರಶ್ನಿಸಿಕೊಳ್ಳಿ ಎಂದು ಕಾಂಗ್ರೆಸ್ ನಾಯಕರಿಗೆ ಅವರು ಸವಾಲೆಸೆದರು.
ವರದಿ :ಅಣ್ಣಪ್ಪ ಗುತ್ತೆಮ್ಮನವರ




