ಭಾಲ್ಕಿ: ಜಗದ್ಗುರು ಶ್ರೀ ರೇಣುಕಾಚಾರ್ಯರ ತತ್ವಾದರ್ಶಗಳು ಮೈಗೂಡಿಸಿಕೊಂಡಾಗ ಸುಂದರ ಸಮಾಜ ನಿರ್ಮಾಣವಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜಿ.ಹಳ್ಳದ್ ಅಭಿಪ್ರಾಯಪಟ್ಟರು. ಪಟ್ಟಣದ ತಹಸೀಲ ಕಚೇರಿಯಲ್ಲಿ ತಾಲೂಕು ಆಡಳಿತದ ವತಿಯಿಂದ ರವಿವಾರ ನಡೆದ ರೇಣುಕಾಚಾರ್ಯರ ಜಯಂತಿ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜಗದ್ಗುರು ಶ್ರೀ ರೇಣುಕಾದಿ ಶಿವಶರಣರು ಮಾನವ ಜನ್ಮದ ಸಾರ್ಥಕತೆಯ ಬಗ್ಗೆ ಸಾಕಷ್ಟು ತಿಳುವಳಿಕೆ ನೀಡಿದ್ದಾರೆ. ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಸಂದೇಶ ಜಗತ್ತಿಗೆ ಸಾರಿದ ಜಗದ್ಗುರು ರೇಣುಕಾಚಾರ್ಯರ ತತ್ವಾದರ್ಶಗಳು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಪ ತಹಸೀಲ್ದಾರ ಪಲ್ಲವಿ ಬೆಳಕೀರೆ, ಜಗತ್ತಿಗೆ ಶಾಂತಿ ಸಂದೇಶ ಸಾರಿದ ಜಗದ್ಗುರು ರೇಣುಕಾಚಾರ್ಯರು ಧರ್ಮಕ್ಕಾಗಿ ಜೀವನ ಸವೆಸಿದರೆ ಸಾರ್ಥಕ ಜೀವನ ನಡೆಸಲು ಸಾಧ್ಯ ಎಂಬ ಸಂದೇಶ ನಮ್ಮೆಲ್ಲರಿಗೂ ತಿಳಿಸಿದ್ದಾರೆ. ಅವರ ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ನಡೆಯಬೇಕಿದೆ ಎಂದು ಹೇಳಿದರು. ಶ್ರೀ ಪಂಚಯ್ಯಾ ಸ್ವಾಮಿ ವಿಶೇಷ ಉಪನ್ಯಾಸ ಮಂಡಿಸಿ, ಜಗದ್ಗುರು ರೇಣುಕಾಚಾರ್ಯರು ಮತ್ತು ಸಿದ್ದಾಂತ ಶಿಖಾಮಣಿ ಧರ್ಮಗ್ರಂಥದ ಸಾರದ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಮುಖರಾದ ಡಾ| ಪ್ರಭುಲಿಂಗ ಸ್ವಾಮಿ, ಭದ್ರೇಶ ಗುರಯ್ಯಾ ಸ್ವಾಮಿ, ಪುರಸಭೆ ಸದಸ್ಯ ಶಂಭುಲಿAಗ ಸ್ವಾಮಿ, ಸಿದ್ರಾಮಯ್ಯ ಸ್ವಾಮಿ, ಮಾಜಿ ಪುರಸಭೆ ಸದಸ್ಯ ಮಹಾದೇವ ಸ್ವಾಮಿ, ಶಿವಶರಣ ಸ್ವಾಮಿ, ಮನ್ಮಥ ಸ್ವಾಮಿ, ಗುರಯ್ಯಾ ಸ್ವಾಮಿ, ಶಂಭುಲಿAಗ ಕನಾಡೆ, ಸಂತೋಷ ಬಿಜಿಪಾಟೀಲ ಉಪಸ್ಥಿತರಿದ್ದರು. ಗುರಯ್ಯಾ ಸ್ವಾಮಿ ಸ್ವಾಗತಿಸಿದರು. ಭದ್ರೇಶ ಸ್ವಾಮಿ ನಿರೂಪಿಸಿದರು. ಮನ್ಮಥಸ್ವಾಮಿ ವಂದಿಸಿದರು.
ವರದಿ : ಸಂತೋಷ ಬಿಜಿ ಪಾಟೀಲ




