ಶಿವಮೊಗ್ಗ: 1 ಲಕ್ಷ ರೂ. ಲಂಚ ಪಡೆಯುತ್ತಿದ್ದ ಭದ್ರಾವತಿ ಬಿಇಒ ಸೇರಿದಂತೆ ಇಬ್ಬರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಲಿಂಗರಾಜು ಅವರು ಈ ಕುರಿತಾಗಿ ದೂರು ನೀಡಿದ್ದ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಭದ್ರಾವತಿ ತಾಲ್ಲೂಕು ಬಿ.ಇ.ಓ ಕಛೇರಿಯಲ್ಲಿ ಕಛೇರಿ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಲಿಂಗರಾಜು, ಅವರಿಗೆ 2011 ನೇ ಸಾಲಿನಿಂದ 2023ನೇ ಸಾಲಿನ ಅವಧಿಯಲ್ಲಿ ತಮ್ಮ ಇಲಾಖೆಯಿಂದ ಬರಬೇಕಾದ ವಾರ್ಷಿಕ ವೇತನ ಬಡ್ತಿಗಳು ಮತ್ತು ಇತರೆ ಭತ್ಯೆಗಳು ಸೇರಿ ಎಲ್ಲಾ ಆರ್ಥಿಕ ಸೌಲಭ್ಯಗಳನ್ನು ನೀಡುವಂತೆ ಹಲವು ಬಾರಿ ಭದ್ರಾವತಿ ತಾಲ್ಲೂಕ್ ಬಿ.ಇ.ಒ, ಅವರಿಗೆ ಶಿಮೊಗ್ಗ ಡಿ.ಡಿ.ಪಿ.ಐ ರವರಿಗೆ ಹಾಗೂ ಮೇಲಾಧಿಕರಿಗಳಿಗೆ ಮನವಿ ಸಲ್ಲಿಸಿರುತ್ತಾರೆ.




