Ad imageAd image

ಪಾಠ ಮಾಡುತ್ತಿದ್ದ ವೇಳೆಯೇ ಹೃದಯಾಘಾತ ಸಂಭವಿಸಿ ಮುಖ್ಯ ಶಿಕ್ಷಕ ಸಾವು 

Bharath Vaibhav
ಪಾಠ ಮಾಡುತ್ತಿದ್ದ ವೇಳೆಯೇ ಹೃದಯಾಘಾತ ಸಂಭವಿಸಿ ಮುಖ್ಯ ಶಿಕ್ಷಕ ಸಾವು 
WhatsApp Group Join Now
Telegram Group Join Now

ಹಾಸನ: ಪಾಠ ಮಾಡುತ್ತಿದ್ದ ವೇಳೆಯೇ ಹೃದಯಾಘಾತ ಸಂಭವಿಸಿ ಮುಖ್ಯ ಶಿಕ್ಷಕರೊಬ್ಬರು ವಿದ್ಯಾರ್ಥಿಗಳ ಮುಂದೆಯೇ ಸಾವನ್ನಪ್ಪಿರುವ ಮನಕಲಕುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಕೇರಳಾಪುರ ಗ್ರಾಮದ ನಿವಾಸಿ ಸತೀಶ್ (53) ಮೃತಪಟ್ಟ ದುರ್ದೈವಿ ಶಿಕ್ಷಕರು.ಇವರು ಕೆಬ್ಬೆಕೊಪ್ಪಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಎಂದಿನಂತೆ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ವೇಳೆ ಇವರಿಗೆ ತೀವ್ರ ಆಯಾಸ ಕಾಣಿಸಿಕೊಂಡಿದೆ.

ಕ್ಷಣಾರ್ಧದಲ್ಲೇ ತೀವ್ರ ಅಸ್ವಸ್ಥಗೊಂಡ ಸತೀಶ್ ಅವರು ತರಗತಿಯಲ್ಲೇ ಕುಸಿದು ಬಿದ್ದಿದ್ದಾರೆ. ಇದನ್ನು ಕಂಡು ಆತಂಕಕ್ಕೊಳಗಾದ ವಿದ್ಯಾರ್ಥಿಗಳು ಕೂಡಲೇ ಇತರ ಶಿಕ್ಷಕರಿಗೆ ಮಾಹಿತಿ ನೀಡಿದ್ದಾರೆ.

ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು:

ಸಹೋದ್ಯೋಗಿ ಶಿಕ್ಷಕರು ಕೂಡಲೇ ಆಂಬುಲೆನ್ಸ್‌ ಗೆ ಕರೆ ಮಾಡಿ ಸತೀಶ್ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ವೈದ್ಯರು ಪರೀಕ್ಷಿಸಿದಾಗ ಅವರು ಮಾರ್ಗಮಧ್ಯೆಯೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ತೀವ್ರ ಹೃದಯಾಘಾತವೇ ಸಾವಿಗೆ ಕಾರಣ ಎಂದು ತಿಳಿದುಬಂದಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!