Ad imageAd image

ಕಳ್ಳತನದ ಆರೋಪಿಗಳನ್ನ ಬಂಧಿಸಲು ಹೋದ ಪೊಲೀಸ್ ರ ಮೇಲೆ ಆರೋಪಿ, ಬೆಂಬಲಿಗರ ಕಲ್ಲು ತೂರಾಟ

Bharath Vaibhav
ಕಳ್ಳತನದ ಆರೋಪಿಗಳನ್ನ ಬಂಧಿಸಲು ಹೋದ ಪೊಲೀಸ್ ರ ಮೇಲೆ ಆರೋಪಿ, ಬೆಂಬಲಿಗರ ಕಲ್ಲು ತೂರಾಟ
WhatsApp Group Join Now
Telegram Group Join Now

ಬೆಳಗಾವಿ : ಕಳ್ಳತನ ಪ್ರಕರಣವೊಂದರ ಆರೋಪಿಗಳನ್ನು ಬಂಧಿಸಲು ಹೋದ ಪೊಲೀಸ್ ತಂಡದ ಮೇಲೆ ಆರೋಪಿಗಳು ಹಾಗೂ ಅವರ ಬೆಂಬಲಿಗರು ಕಲ್ಲು ತೂರಾಟ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬೆಳಗಾವಿ ಜಿಲ್ಲೆಯ ಹಾರೂಗೇರಿ ಪೊಲೀಸರು ನೀಡಿದ ಖಚಿತ ಮಾಹಿತಿಯ ಮೇರೆಗೆ ಮಹಾರಾಷ್ಟ್ರದ ಜಾಲನಾ ಜಿಲ್ಲೆಯ ಪೊಲೀಸರು ಕಾರ್ಯಾಚರಣೆಗೆ ಇಳಿದಾಗ ಈ ಆತಂಕಕಾರಿ ಘಟನೆ ಸಂಭವಿಸಿದೆ.

ಬೆಳಗಾವಿ ಜಿಲ್ಲೆಯ ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಜನವರಿ ತಿಂಗಳಿನಲ್ಲಿ ದೊಡ್ಡ ಮಟ್ಟದ ಕಳ್ಳತನ ಪ್ರಕರಣವೊಂದು ವರದಿಯಾಗಿತ್ತು.

ಈ ಪ್ರಕರಣದ ಬೆನ್ನತ್ತಿದ ಹಾರೂಗೇರಿ ಪೊಲೀಸರಿಗೆ, ಆರೋಪಿಗಳು ಮಹಾರಾಷ್ಟ್ರದ ಜಾಲನಾ ಜಿಲ್ಲೆಯ ‘ಗೋಂದಿ ತಾಂಡಾ’ದಲ್ಲಿ ಅಡಗಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿತ್ತು.

ಜಂಟಿ ಕಾರ್ಯಾಚರಣೆ ವೇಳೆ ಕಲ್ಲು ತೂರಾಟ:

ಆರೋಪಿಗಳು ಬೇರೆ ರಾಜ್ಯದಲ್ಲಿದ್ದ ಕಾರಣ, ಹಾರೂಗೇರಿ ಪೊಲೀಸರು ತಕ್ಷಣವೇ ಮಹಾರಾಷ್ಟ್ರದ ಜಾಲನಾ ಜಿಲ್ಲೆಯ ಪೊಲೀಸರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದರು. ಸ್ಥಳೀಯ ಪೊಲೀಸರ ಸಹಾಯವಿಲ್ಲದೆ ಆರೋಪಿಗಳನ್ನು ಹಿಡಿಯುವುದು ಕಷ್ಟವೆಂದು ಅರಿತ ತಂಡವು ಜಂಟಿ ಕಾರ್ಯಾಚರಣೆಗೆ ಮುಂದಾಗಿತ್ತು. ಹಾರೂಗೇರಿ ಪೊಲೀಸರ ಮಾಹಿತಿಯಂತೆ ಜಾಲನಾ ಪೊಲೀಸರು ಗೋಂದಿ ತಾಂಡಾದ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆಯಲು ಮುಂದಾದರು.

ಆದರೆ, ಈ ಸಂದರ್ಭದಲ್ಲಿ ಸಿನಿಮಾ ಶೈಲಿಯಲ್ಲಿ ಪ್ರತಿರೋಧ ತೋರಿದ ಆರೋಪಿಗಳು ಮತ್ತು ಅವರ ಕಡೆಯವರು ಪೊಲೀಸರ ಮೇಲೆ ಏಕಾಏಕಿ ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರು ತಮಗೆ ಸುತ್ತುವರಿಯುತ್ತಿರುವುದನ್ನು ಕಂಡು ಕಂಗಾಲಾದ ಕಳ್ಳರು, ತಪ್ಪಿಸಿಕೊಳ್ಳುವ ಉದ್ದೇಶದಿಂದ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!