Ad imageAd image

ಒಳಮೀಸಲಾತಿ ಹಂಚಿಕೆಯಾಗದೆ ನೇಮಕಾತಿಗಳು ನಡೆಯಲಿವೆ : ಸಚಿವ ಎಚ್ ಕೆ ಪಾಟೀಲ್ 

Bharath Vaibhav
ಒಳಮೀಸಲಾತಿ ಹಂಚಿಕೆಯಾಗದೆ ನೇಮಕಾತಿಗಳು ನಡೆಯಲಿವೆ : ಸಚಿವ ಎಚ್ ಕೆ ಪಾಟೀಲ್ 
WhatsApp Group Join Now
Telegram Group Join Now

ಬೆಂಗಳೂರು : ಉದ್ಯೋಗ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಇದೀಗ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಪರಿಶಿಷ್ಟ ಜಾತಿ (ಎಸ್ಸಿ) ಒಳಮೀಸಲಾತಿ ಹಂಚಿಕೆಯಾಗದೆಯೇ ನೇಮಕಾತಿ ಪ್ರಕ್ರಿಯೆಗಳು ಮುಂದುವರಿಯಲಿದೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು.

ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದ್ದು, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ ಆಗಿರುವುದರಿಂದ ನೀತಿ ಸಂಹಿತೆ ಜಾರಿಯಾಗಿದೆ.

ಈ ಹಿನ್ನೆಲೆಯಲ್ಲಿ ಒಳಮೀಸಲಾತಿ ಕುರಿತಂತೆ ಯಾವುದೇ ನಿರ್ಣಯ ತೆಗೆದುಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಈ ನಿರ್ಣಯಕ್ಕೆ ಬರಲಾಗಿದೆ.

ಆದರೆ, ಈಗಾಗಲೇ ದಲಿತ ಸಂಘಟನೆಗಳು ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಸಾಕಷ್ಟು ಪ್ರತಿಭಟನೆಗಳು ನಡೆಸಿದ್ದು, ಮೂರ್ನಾಲ್ಕು ದಶಕಗಳಿಂದ ನಡೆಸುತ್ತಿರುವ ಹೋರಾಟಕ್ಕೆ ನ್ಯಾಯ ಸಿಗದಿರುವ ಬಗ್ಗೆ ಅಸಮಾಧಾನ ಹೊರಹಾಕಿವೆ. ಈ ಹಂತದಲ್ಲಿ ವಿಶೇಷ ಸಂಪುಟ ಸಭೆ ಮುಂದೂಡಿಕೆಯಾಗಿದ್ದು, ಉಪಚುನಾವಣೆ ಮುಗಿಯುವವರೆಗೆ ಸಮಾಧಾನದಿಂದ ಇರುವುದು ಅನಿವಾರ್ಯವಾಗಿದೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!