ಕಲಬುರಗಿ: ಅಫಜಲಪುರ ತಾಲೂಕಿನ ಬಳ್ಳೂರಗಿ ಬಳಿ ನಡೆದಿದ್ದ ಸಯಾಲಿ ಜಾಧವ್ ಎಂಬಾಕೆಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಅಕ್ಷಯ್ ಜಾಧವ್ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮೃತ ಸಯಾಲಿ ಮತ್ತು ಅಕ್ಷಯ್ 2022ರಲ್ಲಿ ಪ್ರೀತಿಸಿ ವಿವಾಹವಾಗಿದ್ದರು. ಮದುವೆಯಾದ ಕೆಲವೇ ದಿನಗಳಲ್ಲಿ ಪತಿ ಅಕ್ಷಯ್ ಹಾಗೂ ಆತನ ಪೋಷಕರು ವರದಕ್ಷಿಣೆಗಾಗಿ ಸಯಾಲಿಗೆ ನಿರಂತರ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಸಯಾಲಿ ತವರು ಮನೆಯಿಂದ ಹಣ ತರದಿದ್ದಕ್ಕೆ ಆಕೆಯನ್ನು ಕೊಲೆ ಮಾಡಲಾಗಿದೆ.
ಮೃತಳ ಕುಟುಂಬಸ್ಥರು ನೀಡಿದ ದೂರಿನನ್ವಯ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.




