ಬೆಂಗಳೂರು: ಗುತ್ತಿಗೆ/ಹೊರಗುತ್ತಿಗೆ ಹಾಗೂ ಗೌರವಧನದ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರ ಅವಲಂಬಿತರಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ಆರೋಗ್ಯ ಯೋಜನೆ ಜಾರಿಗೊಳಿಸಿರುವಂತೆಯೇ ಅರ್ಹ ದಿನಗೂಲಿ ನೌಕರರಿಗೂ ಸಹ ಈ ಸೌಲಭ್ಯವನ್ನು ವಿಸ್ತರಿಸುವ ಬಗ್ಗೆ ಸರ್ಕಾರದ ಆದೇಶ ಹೊರಡಿಸಿದೆ.
ಈ ಸೌಲಭ್ಯವನ್ನು ತಮಗೂ ವಿಸ್ತರಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಮನವಿ ಮಾಡಿದ್ದು, ಅವರ ಬೇಡಿಕೆಗೆ ಸರ್ಕಾರ ಸ್ಪಂದಿಸಿ ಈ ಯೋಜನೆ ವಿಸ್ತರಿಸಬೇಕಾದ ಕಾರಣ 5 ಲಕ್ಷ ರೂ. ನಗದು ರಹಿತ ಆರೋಗ್ಯ ಭರವಸೆ ಯೋಜನೆ ಸೌಲಭ್ಯವನ್ನು ದಿನಗೂಲಿ ನೌಕರರಿಗೆ ವಿಸ್ತರಿಸಲಾಗಿದೆ. ಈ ಸಂಬಂಧ ನೌಕರರು ತಮ್ಮ ಪಾಲಿನ ವಂತಿಗೆ ಪಾವತಿಸಬೇಕು. ಉಳಿದ ಮೊತ್ತವನ್ನು ರಾಜ್ಯ ಸರ್ಕಾರ ಭರಿಸುತ್ತದೆ.




