ಸೇಡಂ: ತಾಲೂಕಿನ ಬಿಜೆಪಿ ಪಕ್ಷದ ಯುವ ಮುಖಂಡರಾದ ಶಿವಕುಮಾರ ತೊಟ್ನಳ್ಳಿ ಅವರಿಗೆ ಎಸ್.ಸಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಅವರು ತಮ್ಮ ಗ್ರಾಮದ ಮುಖಂಡರು ಹಾಗೂ ಆಪ್ತರೊಂದಿಗೆ ಮಾಜಿ ಶಾಸಕರಾದ ರಾಜಕುಮಾರ ಪಾಟೀಲ್ ತೇಲ್ಕೂರ ನಿವಾಸಕ್ಕೆ ತೆರಳಿ ದಂಪತಿಗಳಿಗೆ ಸನ್ಮಾನಿಸಿ ಗೌರವಿಸಿದರು. ತದನಂತರ ತೇಲ್ಕೂರ ದಂಪತಿಗಳು ಶಿವಕುಮಾರ ತೊಟ್ನಳ್ಳಿ ಅವರನ್ನು ಸನ್ಮಾನಿಸಿ ಶುಭ ಕೋರಿದರು. ಈ ವೇಳೆಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಇದ್ದರು.
ವರದಿ : ವೆಂಕಟಪ್ಪ ಕೆ ಸುಗ್ಗಾಲ್




