Ad imageAd image

ಸಿದ್ದೇಶ್ವರ ಜಾತ್ರೆಯಲ್ಲಿ ಬರ್ಬರ ಹತ್ಯೆ : 8 ಆರೋಪಿಗಳು ಅರೆಸ್ಟ್ 

Bharath Vaibhav
ಸಿದ್ದೇಶ್ವರ ಜಾತ್ರೆಯಲ್ಲಿ ಬರ್ಬರ ಹತ್ಯೆ : 8 ಆರೋಪಿಗಳು ಅರೆಸ್ಟ್ 
CRIME
WhatsApp Group Join Now
Telegram Group Join Now

ಬೆಳಗಾವಿ: ಬೆಳಗಾವಿಯ ಹಣ್ಣಿಕೇರಿ ಗ್ರಾಮದ ಸಿದ್ದೇಶ್ವರ ಜಾತ್ರೆಯಲ್ಲಿ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆಗೈದಿದ್ದ ಪ್ರಕರಣ ಸಂಬಂಧ ನೆಸರಗಿ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ.

ಮಾರ್ಚ್ 31 ರಂದು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದ ಸಿದ್ದೇಶ್ವರ ಜಾತ್ರೆಯಲ್ಲಿ ಮದ್ಯಪಾನ ಮಾಡಿ ಡಾನ್ಸ್ ಮಾಡುತ್ತಿದ್ದ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆಗೈಯ್ಯಲಾಗಿತ್ತು.

ಹಳೆಯ ವೈಷ್ಯಮಕ್ಕೆ ಕೊಲೆ ನಡೆದಿತ್ತು. ಸಂಗನಗೌಡ ಬಸನಗೌಡ ಪಾಟೀಲ್ (50) ಕೊಲೆಯಾದ ವ್ಯಕ್ತಿ.

ಪ್ರಕರಣ ಸಂಬಂಧ ನೇಸರಗಿ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ. ದೇಮಪ್ಪ @ ಮುದಕಪ್ಪ ಬಸಲಿಂಗಪ್ಪ ಬಳಗನ್ನವರ (49), ಮಂಜುನಾಥ ಮಾರುತಿ ಬಳಗನ್ನವರ (27), ರುದ್ರಪ್ಪ ಚೂನಪ್ಪ @ ಶಿವನಪ್ಪ ಬಳಗನ್ನವರ (36), ವಿಜಯ ಸುರೇಶ ಬಳಗನ್ನವರ (26), ಸೂರಪ್ಪ ಬಸಲಿಂಗಪ್ಪ ಬಳಗನ್ನವರ (56), ಸಿದ್ದಪ್ಪ ಬಸಪ್ಪ ಸಿಂಗಾಡಿ ವಯಸ್ಸು (21), ನಾಗರಾಜ ರಾಮಪ್ಪ ಬಳಗನ್ನವರ (26) ಹಾಗೂ ಬಸವಂತಪ್ಪ ಲಕ್ಷ್ಮಣ ಬಳಗನ್ನವರ (45) ಬಂಧಿತ ಆರೋಪಿಗಳು.

ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ. ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!