Ad imageAd image

ಆಸ್ತಿ ವಿಚಾರಕ್ಕೆ ಮಗನ ಕೊಲೆ : ತಂದೆ ಹಾಗೂ ಇಬ್ಬರು ಸಂಬಂಧಿಕರಿಗೆ ಜೀವಾವಧಿ ಶಿಕ್ಷೆ 

Bharath Vaibhav
ಆಸ್ತಿ ವಿಚಾರಕ್ಕೆ ಮಗನ ಕೊಲೆ : ತಂದೆ ಹಾಗೂ ಇಬ್ಬರು ಸಂಬಂಧಿಕರಿಗೆ ಜೀವಾವಧಿ ಶಿಕ್ಷೆ 
LAW
WhatsApp Group Join Now
Telegram Group Join Now

ಉತ್ತರಕನ್ನಡ : ಆಸ್ತಿ ವಿಚಾರಕ್ಕೆ ಮಗನನ್ನೇ ಕೊಲೆ ಮಾಡಿದ ತಂದೆ ಹಾಗೂ ಇಬ್ಬರು ಸಂಬಂಧಿಕರು ಸೇರಿದಂತೆ ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ ಶಿರಸಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಶುಕ್ರವಾರ ಮಹತ್ವದ ತೀರ್ಪು ನೀಡಿದೆ.ಹಳಿಯಾಳ ಪೊಲೀಸ್ ಠಾಣ ವ್ಯಾಪ್ತಿಯ ಬಿಡೊಳ್ಳಿ ಗ್ರಾಮದಲ್ಲಿ ಕೇಶವ ಎಂಬ ಯುವಕನ ಕೊಲೆ ನಡೆದಿತ್ತು.

ಈ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ, ನ್ಯಾಯಾಲಯವು ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿದೆ. ಅಕ್ಷಯ್ ಅಲಿಯಾಸ್ ಆಕಾಶ್ ಕಿತ್ತೂರಕರ್, ಪಾಂಡುರಂಗ ಕಿತ್ತೂರಕರ್ ಹಾಗೂ ಲತಾ ಅಲಿಯಾಸ್ ತುಳಸಾಯಿ ಕಿತ್ತೂರಕರ್ ಎಂಬುವವರೇ ಶಿಕ್ಷೆಗೆ ಗುರಿಯಾದ ಅಪರಾಧಿಗಳು. ಇವರಿಗೆ ಜೀವಾವಧಿ ಶಿಕ್ಷೆ ಸಹಿತ ತಲಾ 25 ರೂ.ಗಳ ದಂಡ ವಿಧಿಸಿ ನ್ಯಾಯಾಧೀಶರಾದ ಕಿರಣ ಕಿಣಿ ಅವರು ಆದೇಶ ಹೊರಡಿಸಿದ್ದಾರೆ.

ಪಾಂಡುರಂಗ ಕಿತ್ತೂರಕರ್​​ನ ಮೊದಲ ಹೆಂಡತಿಯ ಮಗನಾದ ಕೇಶವ ತನಗೆ ಬರಬೇಕಾದ ಆಸ್ತಿಯ ಪಾಲನ್ನು ಕೇಳಿದ್ದೇ ಆತನ ಪ್ರಾಣಕ್ಕೆ ಸಂಚಕಾರವಾಗಿತ್ತು. ಮಗನಿಗೆ ಆಸ್ತಿ ನೀಡುವುದನ್ನು ತಪ್ಪಿಸುವ ಉದ್ದೇಶದಿಂದ ಆರೋಪಿಗಳು ಸಂಚು ರೂಪಿಸಿ, ಪ್ಲಾಸ್ಟಿಕ್ ಹಗ್ಗದಿಂದ ಆತನ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದರು. ಬಳಿಕ ಆತನನ್ನು ಕಂಬಕ್ಕೆ ಕಟ್ಟಿ ಹಾಕಿ ಕ್ರೂರವಾಗಿ ಕೊಲೆ ಮಾಡಿ, ಸಾಕ್ಷ್ಯಗಳನ್ನು ನಾಶಪಡಿಸಲು ಪ್ರಯತ್ನಿಸಿದ್ದರು.

ಈ ಗಂಭೀರ ಪ್ರಕರಣದ ಕುರಿತು ಹಳಿಯಾಳ ಪೊಲೀಸ್ ಠಾಣೆಯ ಅಂದಿನ ತನಿಖಾಧಿಕಾರಿ ಹಾಗೂ ಉಪನಿರೀಕ್ಷಕ ಬಿ.ಎಸ್. ಲೋಕಾಪುರ ಅವರು ಸಮಗ್ರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ವಿಚಾರಣೆಯ ಸಂದರ್ಭದಲ್ಲಿ ಹಳಿಯಾಳ ಠಾಣೆ ಪೊಲೀಸ್ ಕಾನ್ಸ್​ಟೇಬಲ್ ಹನುಮಂತ ಬಗಿ ಅವರು ಸಾಕ್ಷಿದಾರರನ್ನು ಕಾಲಕಾಲಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸುವ ಮೂಲಕ ಕಾನೂನು ಪ್ರಕ್ರಿಯೆಗೆ ಸಹಕರಿಸಿದ್ದರು.

 

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!