ತುರುವೇಕೆರೆ: ತಾಲೂಕು ಭಾರತೀಯ ಜನತಾ ಪಕ್ಷದ ಉಪಾಧ್ಯಕ್ಷರಾಗಿ ಟಿ.ಎಂ.ನವೀನ್ ಬಾಬು ಅವರನ್ನು ನೇಮಕ ಮಾಡಿ ಬಿಜೆಪಿ ಮಂಡಲಾಧ್ಯಕ್ಷ ಪ್ರಕಾಶ್ ಯಾದವ್ ಆದೇಶ ಹೊರಡಿಸಿದ್ದಾರೆ.
ಈ ಕುರಿತಂತೆ ಮಾತನಾಡಿದ ನೂತನ ಉಪಾಧ್ಯಕ್ಷ ನವೀನ್ ಬಾಬು, ಪಕ್ಷ ಹಾಗೂ ಮಾಜಿ ಶಾಸಕ ಮಸಾಲಾ ಜಯರಾಮ್ ಅವರು ನನ್ನ ಮೇಲಿಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇನೆ. ಪಕ್ಷವನ್ನು ಪಟ್ಟಣ ಹಾಗೂ ತಾಲೂಕಿನಲ್ಲಿ ಸಂಘಟಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಮುಂಬರುವ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ, ಮಸಾಲಾ ಜಯರಾಮ್ ಅವರನ್ನು ಶಾಸಕರನ್ನಾಗಿಸುವ ಕಾರ್ಯದಲ್ಲಿ ಪಕ್ಷದ ಮಾರ್ಗದರ್ಶನದಲ್ಲಿ ದುಡಿಯುವುದಾಗಿ ಹೇಳಿದರು.
ವರದಿ: ಗಿರೀಶ್ ಕೆ ಭಟ್




