Ad imageAd image

ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿಪಡಿಸಿ ಕರಡು ಅಧಿಸೂಚನೆ

Bharath Vaibhav
ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿಪಡಿಸಿ ಕರಡು ಅಧಿಸೂಚನೆ
vidhana soudha
WhatsApp Group Join Now
Telegram Group Join Now

ಬೆಂಗಳೂರು: ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ರಾಜ್ಯದ ವಿವಿಧ ಜಿಲ್ಲೆಗಳ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿ ಕರಡು ಅಧಿಸೂಚನೆಯನ್ನು ಹೊರಡಿಸಿದೆ.

ಸದಸ್ಯರ ಸಂಖ್ಯೆ ನಿಗದಿ: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಆಯೋಗವು ಬೆಂಗಳೂರು ನಗರ, ಕಲಬುರಗಿ, ಕೊಪ್ಪಳ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು, ದಾವಣಗೆರೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ ಮತ್ತು ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳ ತಾಲ್ಲೂಕುಗಳಲ್ಲಿನ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿದೆ.

ಆಕ್ಷೇಪಣೆ ಸಲ್ಲಿಕೆಗೆ ಅವಧಿ: ಈ ಕರಡು ಅಧಿಸೂಚನೆಯಲ್ಲಿ ನಿಗದಿಪಡಿಸಿರುವ ಸದಸ್ಯರ ಸಂಖ್ಯೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಆಕ್ಷೇಪಣೆಗಳನ್ನು ಸಲ್ಲಿಸಲು ಏಳು ದಿನಗಳ ಕಾಲಾವಕಾಶ ನೀಡಲಾಗಿದೆ. ದಿನಾಂಕ 24-04-2026 ಸಂಜೆ 5:00 ಗಂಟೆಯೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.

ಸಲ್ಲಿಕೆ ವಿಧಾನ: ಆಕ್ಷೇಪಣೆಗಳನ್ನು ಆನ್‌ಲೈನ್ ಮೂಲಕ (https://rdpr.karnataka.gov.in/rdc/public/) ಅಥವಾ ಬೆಂಗಳೂರಿನ ಬಹುಮಹಡಿಗಳ ಕಟ್ಟಡದಲ್ಲಿರುವ ಆಯೋಗದ ಕಚೇರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಪರಿಶೀಲನಾ ಅದಾಲತ್:

ಸಲ್ಲಿಕೆಯಾದ ಆಕ್ಷೇಪಣೆಗಳ ಕುರಿತು ವಿಚಾರಣೆ ನಡೆಸಲು ಆಯೋಗವು ದಿನಾಂಕ 27-04-2026 ರಂದು ಬೆಳಿಗ್ಗೆ 11:00 ರಿಂದ ಮಧ್ಯಾಹ್ನ 1:30 ರವರೆಗೆ ಬೆಂಗಳೂರಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಚೇರಿಯಲ್ಲಿ ಪರಿಶೀಲನಾ ಅದಾಲತ್ ಹಮ್ಮಿಕೊಂಡಿದೆ. ಅದಾಲತ್‌ನಲ್ಲಿ ಭಾಗವಹಿಸಲು ಇಚ್ಛಿಸುವವರು ತಮ್ಮ ಗುರುತಿನ ಚೀಟಿಯೊಂದಿಗೆ ಹಾಜರಾಗಬೇಕೆಂದು ಆಯೋಗದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

_ಗ್ರಾಮ_ಪಂಚಾಯತ_ಸದಸ್ಯರ_ಸಂಖ್ಯೆಯನ್ನು_ನಿಗದಿಪಡಿಸಿರುವ_ಕರಡು_ಅಧಿಸೂಚನೆ

 

 

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!