Ad imageAd image

ಸಂಭಾಜಿ ಮಹಾರಾಜ್ ಕುರಿತು ಆಕ್ಷೇಪಾರ್ಹ ವಿಚಾರ: ವಿಕಿಪೀಡಿಯಾ ಸಂಪಾದಕರ ವಿರುದ್ಧ ಪ್ರಕರಣ ದಾಖಲು

Bharath Vaibhav
ಸಂಭಾಜಿ ಮಹಾರಾಜ್ ಕುರಿತು ಆಕ್ಷೇಪಾರ್ಹ ವಿಚಾರ:  ವಿಕಿಪೀಡಿಯಾ ಸಂಪಾದಕರ ವಿರುದ್ಧ ಪ್ರಕರಣ ದಾಖಲು
WhatsApp Group Join Now
Telegram Group Join Now

ಮುಂಬೈ: ಓಪನ್ ಸೋರ್ಸ್ ಎನ್‌ಸೈಕ್ಲೋಪೀಡಿಯಾದಿಂದ ಛತ್ರಪತಿ ಸಂಭಾಜಿ ಮಹಾರಾಜ್ ಕುರಿತಾದ ಆಕ್ಷೇವಾರ್ಹ ವಿಷಯವನ್ನು ತೆಗೆದುಹಾಕದ ಕಾರಣಕ್ಕಾಗಿ ಮಹಾರಾಷ್ಟ್ರ ಸೈಬರ್ ಸೆಲ್ ವಿಕಿಪೀಡಿಯಾದ ಕನಿಷ್ಟ ನಾಲ್ವರು ಸಂಪಾದಕರ ವಿರುದ್ಧ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಪವಿಖಾ ಏಜೆನ್ಸಿಯು ಕ್ಯಾಲಿಫೋರ್ನಿಯಾ ಮೂಲದ ವಿಕಿಮೀಡಿಯಾ ಫೌಂಡೇಶನ್‌ಗೆ ನೋಟಿಸ್ ಕಳುಹಿಸಿದ್ದು, ವಿಕಿಪೀಡಿಯಾದಿಂದ ಆಕ್ಷೇಪಾರ್ಹ ವಿಚಾರವನ್ನು ತೆಗೆದುಹಾಕುವಂತೆ ಮನವಿ ಮಾಡಿದೆ. ವಿಕಿಮೀಡಿಯಾ ಫೌಂಡೇಶನ್ ವಿಕಿಪೀಡಿಯಾವನ್ನು ನಡೆಸುವ ಲಾಭರಹಿತ ಸಂಸ್ಥೆಯಾಗಿದೆ.

ವಿಕಿಪೀಡಿಯಾದಲ್ಲಿನ ವಿಚಾರವು ವನ್ನಾಗಿದೆ ಮತ್ತು ಮರಾಠ ಸಾಮ್ರಾಜ್ಯದ ಸಂಸ್ಥಾಪಕ ಛತ್ರವತಿ ಶಿವಾಜಿ ಮಹಾರಾಜರ ಪುತ್ರ ಸಂಭಾಜಿ ಮಹಾರಾಜರಮ್ಮ ಭಾರತದಲ್ಲಿ ಪೂಜ್ಯ ಭಾವನೆಯಿಂದ ಕಾಣಲಾಗುತ್ತದೆ. ಹೀಗಾಗಿ ಅವರ ಕುರಿತಾದ ಅಕ್ಷವಾರ್ಹ ವಿಚಾರಗಳು ರಾಜ್ಯದಲ್ಲಿನ ಕಾನೂನು ಮತ್ತು ಸುವ್ಯವಸ್ಥೆಗೆ ತೊಡಕಾಗಬಹುದು ಎಂದು ಮಹಾರಾಷ್ಟ್ರ ಸೈಬರ್ ಸಂಸ್ಥೆ ಮೋಟೆಸ್‌ನಲ್ಲಿ ಉಲ್ಲೇಖಿಸಿದೆ.

ವಿಕಿಪೀಡಿಯಾದಲ್ಲಿ ಫೋಸ್ಟ್ ಮಾಡಲಾದ ಮಾಹಿತಿಯು ಸಂಭಾಜಿ ಅವರ ಅನುಯಾಯಿಗಳಲ್ಲಿ ಅಶಾಂತಿಗೆ ಕಾರಣವಾಗಬಹುದು ಎಂದು ನೋಟಿಸ್ ಉಲ್ಲೇಖಿಸಿದೆ.ಈ ವಿಷಯವನ್ನು ತೆಗೆದುಹಾಕುವ ಬಗ್ಗೆ, ವಿಕಿಮೀಡಿಯಾದಿಂದ ಯಾವುದೇ ಪ್ರತಿಕ್ರಿಯ ಲಭ್ಯವಾಗದ ಕಾರಣ ಮಹಾರಾಷ್ಟ್ರ ಸೈಬರ್ ಸೆಲ್ ವಿಕಿಪೀಡಿಯಾದ ಕನಿಷ್ಟ ನಾಲ್ವರು ಸಂಪಾದಕರ ವಿರುದ್ಧ ಐಟಿ ಕಾಯ್ದೆಯ ಸಂಬಂಧಿತ ಸನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ ಎಂದು ಅವರು ಹೇಳಿದರು. ಇತ್ತೀಚೆಗೆ ಬಿಡುಗಡೆಯಾದ ಸಂಭಾಜಿ ಮಹಾರಾಜರ ಜೀವನಾಧಾರಿತ ಹಿಂದಿ ಚಲನಚಿತ್ರ   ಛಾವಾ ಹಿನ್ನೆಲೆಯಲ್ಲಿ ಈ ಆಕ್ಷೇಪಣೆಗಳು ಬಂದಿವೆ.

 

WhatsApp Group Join Now
Telegram Group Join Now
Share This Article
error: Content is protected !!