ಚಿಕ್ಕೋಡಿ: ಗಣೇಶ ಹಬ್ಬದ ದಿನದಂದೇ ತನ್ನ ನಾಲ್ಕು ತಿಂಗಳ ಗಂಡು ಮಗುವನ್ನು ತಂದೆ ಸಾಯಿಸಿದ್ದಾನೆ. ಸಿಟ್ಟಿನಿಂದ ಡಾಂಬರ್ ರಸ್ತೆ ಮೇಲೆ 4 ತಿಂಗಳ ಮಗು ಎಸೆದು ಕೊಂದಿದ್ದಾನೆ. ತಾಯಿಯ ತವರು ಮನೆ ಬಳಿ ರಸ್ತೆಯಲ್ಲೇ ಉಸಿರು ಚೆಲ್ಲಿದೆ ಹಸುಗೂಸು.
ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ಸೆಪ್ಟೆಂಬರ್ 18ರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ದುರದುಂಡಿ ಗ್ರಾಮದ ಬಸಪ್ಪ ಬಳುನಕಿ ಎಂಬಾತನಿಂದ 4 ತಿಂಗಳ ಮಗು ಸಂಚಿತ್ ಹತ್ಯೆಗೀಡಾಗಿದ್ದಾನೆ.
ಕೆಎಸ್ಐಎಸ್ಎಫ್ ಪೇದೆಯಾಗಿದ್ದ ಬಸಪ್ಪ ಬಳುಣಕಿ ಬೆಳಗಾವಿಯ ಸಾಂಬ್ರಾ ಏರ್ಪೋರ್ಟ್ನಲ್ಲಿ ಕೆಲಸ ಮಾಡ್ತಿದ್ದ. ಒಂದೂವರೆ ವರ್ಷದ ಹಿಂದೆ ಚಿಂಚಲಿಯ ಲಕ್ಷ್ಮೀ ಜೊತೆ ಬಸಪ್ಪ ವಿವಾಹವಾಗಿದ್ದ. ಲಕ್ಷ್ಮೀ-ಬಸಪ್ಪ ದಂಪತಿಗೆ 4 ತಿಂಗಳ ಹಿಂದೆ ಗಂಡು ಮಗುವಾಗಿತ್ತು. ಮಗುವಾದ ಬಳಿಕ ಲಕ್ಷ್ಮೀ ಚಿಂಚಲಿಯ ತಾಯಿಯ ಮನೆಯಲ್ಲಿ ವಾಸವಿದ್ದಳು.
ಸೆಪ್ಟೆಂಬರ್ 18ರಂದು ಚಿಂಚಲಿ ಗ್ರಾಮಕ್ಕೆ ಆಗಮಿಸಿದ್ದ ಬಸಪ್ಪ ಊರಲ್ಲಿ ಜಾತ್ರೆಯಿದೆ, ಮಗುವನ್ನು ಒಯ್ಯುತ್ತೇನೆ ಎಂದಿದ್ದಾನೆ. ಬೈಕ್ ಮೇಲೆ ನಾಲ್ಕು ತಿಂಗಳ ಮಗುವನ್ನು ಕರೆದುಕೊಂಡು ಹೋಗಲು ತಂದೆ ಬಸಪ್ಪ ಮುಂದಾಗಿದ್ದಾನೆ.
ಈ ವೇಳೆ, ಬೇಡ ಅಷಚ್ಟು ಚಿಕ್ಕ ಮಗುವನ್ನು ಕರೆದುಕೊಂಡು ಹೋಗಲು ಸಾಧ್ಯವಾಗದು ಅಂತಾ ಮನೆಯವರು ತಡೆದಿದ್ದಾರೆ. ಅದಕ್ಕೆ ಮಗುವನ್ನು ಮೇಲಕ್ಕೆ ಎಸೆದು ಮಗು ಸಾಯುವಂತೆ ಮಾಡಿದ್ದಾನೆ ಅಪ್ಪ.
ಮಗುವನ್ನು ಕಾರಿನಲ್ಲೇ ಮಲಗಿಸಿ ಮರೆತು ಹೋಗಿದ್ದ ತಂದೆ, 7 ಗಂಟೆಯ ಬಳಿಕ ವಾಪಸಾಗುವಷ್ಟರಲ್ಲಿ ಪತಿಯ ದುಷ್ಕೃತ್ಯವನ್ನು ಕಣ್ಣೀರು ಹಾಕುತ್ತಾ ಬಿಚ್ಚಿಟ್ಟಿದ್ದಾಲೇ ಪತ್ನಿ ಲಕ್ಷ್ಮೀ. ವರದಕ್ಷಿಣೆ ನೀಡುವಂತೆ ಪತ್ನಿಗೆ ನಿತ್ಯ ಕಿರುಕುಳ ನೀಡುತ್ತಿದ್ದ. ಬೈಕ್, ಬಂಗಾರ, ಹಣ ನೀಡಿಲ್ಲ ಎಂದು ಕಿರುಕುಳ ನೀಡುತ್ತಿದ್ದ ಎಂದು ಬಸಪ್ಪನ ವಿರುದ್ಧ ಆರೋಪಿಸಿದ್ದಾರೆ. ಆರೋಪಿ ಬಸಪ್ಪನನ್ನು ವಶಕ್ಕೆ ಪಡೆದ ಕುಡಚಿ ಠಾಣೆ ಪೊಲೀಸರು, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.