Ad imageAd image
- Advertisement -  - Advertisement -  - Advertisement - 

ದೃಷ್ಟಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಅದ್ದೂರಿ ಶಿಕ್ಷಕರ ದಿನಾಚರಣೆ

Bharath Vaibhav
ದೃಷ್ಟಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಅದ್ದೂರಿ ಶಿಕ್ಷಕರ ದಿನಾಚರಣೆ
WhatsApp Group Join Now
Telegram Group Join Now

ಧಾರವಾಡ:- ಪಟ್ಟಣದ ದೃಷ್ಟಿ ಅರವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಮಾಜಿ ರಾಷ್ಟ್ರಪತಿಗಳು ಆದಂತಹ ಡಾ ಸರ್ವೆಪಲ್ಲಿ ರಾಧಾಕೃಷ್ಣನ ಅವರ ಹುಟ್ಟು ಹಬ್ಬದ ನಿಮಿತ್ಯ ಶಿಕ್ಷಕರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಮುಖ್ಯ ಉಪಾಧ್ಯಯರಾದ ಶ್ರೀ ರೇವಯ್ಯ ಹಿರೇಮಠ ಅವರಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯೋಪಾಧ್ಯಾಯರಾದ ಶ್ರೀ ರೇವಯ್ಯ ಹಿರೇಮಠ ಅವರು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಆದಷ್ಟು ಮೌಲ್ಯಗಳನ್ನ ಅಳವಡಿಸಿಕೊಳ್ಳಬೇಕು ಏಕೆಂದರೆ ವಿದ್ಯಾರ್ಥಿ ಜೀವನದಲ್ಲಿ ಎಷ್ಟೇ ಮೌಲ್ಯಗಳನ್ನ ಅಳವಡಿಸಿಕೊಂಡರು ಅವರ ಮುಂದಿನ ಜೀವನಕ್ಕೆ ಅತಿ ಮುಖ್ಯವಾಗುತ್ತದೆ ಹಾಗೂ ಎಲ್ಲ ವಿದ್ಯಾರ್ಥಿಗಳು ಕಾಲೇಜು ದಿನಗಳನ್ನು ಆದಷ್ಟು ಶ್ರದ್ಧೆ ಭಕ್ತಿಯಿಂದ ನಡೆಸಿಕೊಂಡು ಹೋಗಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸುವ ಮೂಲಕ ಎಲ್ಲರಿಗೂ ಶಿಕ್ಷಕರ ದಿನಾಚರಣೆಯ ಶುಭಾಶಯಗಳು

ಈ ಸಂದರ್ಭದಲ್ಲಿ ಕಾಲೇಜು ಆಡಳಿತದ ಎಲ್ಲ ವರ್ಗದ ಅಧಿಕಾರಿಗಳು ಹಾಗೂ ಶಿಕ್ಷಕರು ಹಾಗೂ ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷರಾದ ರಮೇಶ್ ಸಂಶಿ, ಪ್ರಜ್ವಲ್ ಕಲ್ಯಾಣಿ, ಬಸವರಾಜ್ ಹಿರೇಮಠ್, ಅಭಿಷೇಕ್, ವಿಶ್ವನಾಥ್ ಮಠಪತಿ, ಸಮರ್ಥ್ ನರೇಂದ್ರ, ದಾನಪ್ಪ ಪೆಟೆ, ಮಝರ್ ಗೋವಾ, ಹಾಗೂ ಈ ಸಂದರ್ಭದಲ್ಲಿ ಎಲ್ಲ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ:- ನಿತೀಶಗೌಡ ತಡಸ ಪಾಟೀಲ್ 

WhatsApp Group Join Now
Telegram Group Join Now
Share This Article
error: Content is protected !!