ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ,ಒಳಮೀಸಲಾತಿ ವಿಷಯದಲ್ಲಿ ನಾಗಮೋಹನ್ ದಾಸ್ ಆಯೋಗ ನೀಡಿರುವ ವರದಿಯನ್ನು ತಿರಸ್ಕರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ದಿನಾಂಕ 25/03/2026 ರಂದು ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಆದ್ದರಿಂದ ಇಂದು ಕಾಳಗಿ ತಾಲೂಕಿನ ಪ್ರವಾಸ ಮಂದಿರದಲ್ಲಿ ದಲಿತ ಮುಖಂಡರಿಂದ ಸಭೆ ಸೇರಲಾಯಿತು, ಈ ಸಭೆಯಲ್ಲಿ ಒಳಮೀಸಲಾತಿ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾವಹಿಸುವಂತೆ ಕಾಳಗಿ ತಾಲೂಕಿನ ಎಲ್ಲಾ ಬಲಗೈ ಸಮುದಾಯದ ಮುಖಂಡರಿಗೆ ಕರೆ ನೀಡಿದರು,
ಇದೆ ವೇಳೆ : ಕಾಳಗಿ ತಾಲೂಕಿನ ಡಾ ಬಾಬಾ ಅಂಬೇಡ್ಕರ್ ರವರ 135ನೇ ಜಯಂತೋತ್ಸವ ಸಮಿತಿ ಪದಾಧಿಕಾರಿಗಳು ಹಾಗೂ ದಲಿತ ಮುಖಂಡರು, ಯುವ ಮುಖಂಡರು, ಉಪಸ್ಥಿತರಿದ್ದರು.
ವರದಿ : ಹಣಮಂತ ಕುಡಹಳ್ಳಿ




