Ad imageAd image

ಬಿಜೆಪಿ ಪಕ್ಷದಿಂದ ಶುಕ್ರವಾರ ಚಿತ್ರದುರ್ಗದಲ್ಲಿ ನಡೆಯುವ ಪ್ರತಿಭಟನೆಯ ಪೂರ್ವಭಾವಿ ಸಭೆ

Bharath Vaibhav
ಬಿಜೆಪಿ ಪಕ್ಷದಿಂದ ಶುಕ್ರವಾರ ಚಿತ್ರದುರ್ಗದಲ್ಲಿ ನಡೆಯುವ ಪ್ರತಿಭಟನೆಯ ಪೂರ್ವಭಾವಿ ಸಭೆ
WhatsApp Group Join Now
Telegram Group Join Now

ಮೊಳಕಾಲ್ಮೂರು:-ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಹಗರಣಗಳ ಸರ್ಕಾರವಾಗಿದೆ ಎಂದು ಮಾಜಿ ಶಾಸಕರಾದ ಎಸ್ ತಿಪ್ಪೇಸ್ವಾಮಿ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ವಾಲ್ಮೀಕಿ ನಿಗಮದಲ್ಲಿ ನಡೆದ 187.33 ಕೋಟಿ ಅಗರಣ ಎಲ್ಲಾ ಸಚಿವರು ಮೌನವಾಗಿದ್ದಾರೆ, ಸಿದ್ದರಾಮಯ್ಯನವರು ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಮಾತನಾಡಿದರು.

ಆದ್ದರಿಂದ ಶುಕ್ರವಾರ ಬಿಜೆಪಿ ರಾಜ್ಯಧ್ಯಕ್ಷರಾದ ವಿಜೇಂದ್ರ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಪ್ರತಿ ಹಳ್ಳಿಯಿಂದ ಬಿಜೆಪಿ ಕಾರ್ಯಕರ್ತರು ಎಲ್ಲಾ ಪಕ್ಷದ ಅಧ್ಯಕ್ಷರುಗಳು ಉಪಾಧ್ಯಕ್ಷರು ಭಾಗಿಯಾಗಬೇಕು ಎಂದು ಕಿವಿಮಾತು ಹೇಳಿದರು.ಅದೇ ರೀತಿ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಆಗದೆ ಪರದಾಡುವ ಸ್ಥಿತಿ ಬಂದಾಗಿದೆ ಖಜಾನೆ ಖಾಲಿಯಾಗಿದೆ, ಕಾಂಗ್ರೆಸ್ ಪಕ್ಷದಲ್ಲೇ ಬಿರುಕು ಉಂಟಾಗಿದೆ ಎಂದರು.

ಈ ಸಂದರ್ಭದಲ್ಲಿ ನಾಯಕನಹಟ್ಟಿ ಮಂಡಲ ಅಧ್ಯಕ್ಷರಾದ ರಾಮರೆಡ್ಡಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಕೆಟಿ ಕುಮಾರಸ್ವಾಮಿ ಎಸ್ ಟಿ ಮೋರ್ಚಾ ಕಾರ್ಯದರ್ಶಿ ಶ್ರೀಮತಿ ಕವನ ರಾಘವೇಂದ್ರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲೇಶ್ ಪ್ರಭಾಕರ್ ಗೋವಿಂದ ಮುಖಂಡರಾದ ತಿಪ್ಪೇಸ್ವಾಮಿ ಮಹೇಶ್ ತಿಪ್ಪಯ್ಯ ಸೂರಮನಹಳ್ಳಿ ನಾಗರಾಜ್ ಮಾರಣ್ಣ ಬಿಜೆಪಿ ಪಕ್ಷದ ಪದಾಧಿಕಾರಿಗಳು ಕಾರ್ಯಕರ್ತರು ಇನ್ನು ಹಲವರು ಉಪಸ್ಥಿತರಿದ್ದರು.

ವರದಿ:- ಪಿಎಂ ಗಂಗಾಧರ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!