Ad imageAd image

ವೀರಶೈವ ಲಿಂಗಾಯತ ಸಮುದಾಯದ ಪ್ರತ್ಯೇಕ ಜಾತಿಗಣತಿ  ನಡೆಯಲಿದೆ : ರಂಭಾಪುರಿ ಶ್ರೀ

Bharath Vaibhav
ವೀರಶೈವ ಲಿಂಗಾಯತ ಸಮುದಾಯದ ಪ್ರತ್ಯೇಕ ಜಾತಿಗಣತಿ  ನಡೆಯಲಿದೆ : ರಂಭಾಪುರಿ ಶ್ರೀ
WhatsApp Group Join Now
Telegram Group Join Now

ಹಾವೇರಿ : ಜಾತಿಗಣವತಿ ವರದಿ ಪಾರದರ್ಶವಕಾಗಿ ಆಗಿಲ್ಲ ಎಂದು ಎಲ್ಲರಿಗೂ ಗೊತ್ತಿದೆ. ಹೀಗಾಗಿ ಜಾತಿಗಣತಿ ವರದಿ ಜಾರಿಯಾಗಬಾರದು. ಅಲ್ಲದೆ ವೀರಶೈವ ಲಿಂಗಾಯತ ಸಮುದಾಯದ ಪ್ರತ್ಯೇಕ ಜಾತಿಗಣತಿ ಕಾರ್ಯ ನಡೆಯಲಿದೆ ಎಂದು ರಂಭಾಪುರಿ ಶ್ರೀಗಳು ಹೇಳಿಕೆ ನೀಡಿದರು.

ಹಾವೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವೀರಶೈವ ಲಿಂಗಾಯತ ಜಾತಿ ಗಣತಿಯು ಶಂಕರ ಬಿದರಿ ನೇತೃತ್ವದಲ್ಲಿ ನಡೆಯಲಿದೆ.

ವೀರಶೈವ ಲಿಂಗಾಯತ ಒಕ್ಕಲಿಕ ಸಮಾಜವನ್ನು ವಿಭಜಿಸಿದ್ದು ಸರಿಯಲ್ಲ. ರಾಜಕೀಯ ಲಾಭ ಕೆಲ ಸಮುದಾಯಗಳ ಓಲೈಕೆಗೆ ವರದಿ ಜಾರಿಗೆ ಯತ್ನಿಸಲಾಗಿದೆ.

ಜಾತಿಗಣತಿ ವರದಿಯನ್ನು ಮರು ಪರಿಶೀಲನೆ ಮಾಡಿ ಜಾರಿಗೊಳಿಸಬೇಕು. ಕಾಂಗ್ರೆಸ್ ಮುಸ್ಲಿಂ ಸಮುದಾಯವನ್ನು ಎತ್ತಿ ಕಟ್ಟುವ ಕೆಲಸ ಮಾಡಬಾರದು.

ಬಿಜೆಪಿಯವರು ಹಿಂದೂಗಳನ್ನು ಎತ್ತಿ ಕಟ್ಟುವ ಕೆಲಸ ಮಾಡಬಾರದು ಎಂದು ಹಾವೇರಿ ತಾಲೂಕಿನ ಗುತ್ತಲ ಪಟ್ಟಣದಲ್ಲಿ ರಂಭಾಪುರ ಶ್ರೀ ಹೇಳಿಕೆ ನೀಡಿದರು.

ಸರ್ಕಾರ ಪತನ

ರಾಜ್ಯದಲ್ಲಿ ಜಾತಿಗಣತಿ ವರದಿ ಜಾರಿಯಾದ್ರೆ ಸರ್ಕಾರ ಪತನವಾಗಲಿದೆ ಎಂದು ಹಾವೇರಿಯಲ್ಲಿ ರಂಭಾಪುರಿ ಶ್ರೀಗಳು ಭವಿಷ್ಯ ನುಡಿದಿದ್ದಾರೆ.ಜಾತಿ ಗಣತಿ ಜಾರಿಯಾದ್ರೆ ಸರ್ಕಾರ ಪತನವಾಗುತ್ತೆ ಅಂತ ಕಾಂಗ್ರೆಸ್ ನಾಯಕರೇ ಹೇಳ್ತಾರೆ.

ಹೀಗಾಗಿ ಜಾತಿಗಣವತಿ ವರದಿ ಪಾರದರ್ಶವಕಾಗಿ ಆಗಿಲ್ಲ ಎಂದು ಎಲ್ಲರಿಗೂ ಗೊತ್ತಿದೆ. ಹೀಗಾಗಿ ಜಾತಿಗಣತಿ ವರದಿ ಜಾರಿಯಾಗಬಾರದು ಎಂದು ಹೇಳಿದ್ದಾರೆ.

ಜಾತಿಗಣತಿ ವರದಿ ಬಗ್ಗೆ ವಿವಿಧ ಸಮುದಾಯಗಳ ಮುಖಂಡರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆ ಮಹತ್ವ ಪಡೆದುಕೊಂಡಿದ್ದು, ನಾಳಿನ ಸಭೆಯಲ್ಲಿ ಜಾತಿಗಣತಿ ವರದಿ ಕುರಿತ ನಿರ್ಧಾರ ಮಹತ್ವ ಪಡೆದುಕೊಂಡಿದೆ.

WhatsApp Group Join Now
Telegram Group Join Now
Share This Article
error: Content is protected !!