ಬೆಂಗಳೂರು : ಬಹುನಿರೀಕ್ಷಿತ ಜಾತಿಗಣತಿ ವರದಿ ಕುರಿತು ತೀರ್ಮಾನಿಸಲು ರಾಜ್ಯ ಸರ್ಕಾರವು ಇಂದು ವಿಶೇಷ ಸಚಿವ ಸಂಪುಟ ಸಭೆ ಕರೆದಿದೆ.
ಜಾತಿಗಣತಿ ಹಿಂದಿನ ಸಮೀಕ್ಷಾ ವರದಿಯ ಅಂಕಿ-ಅಂಶಗಳ ಬಗ್ಗೆ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪರಿಷ್ಕೃತ ಸಮೀಕ್ಷೆ ಹೆಸರಿನಲ್ಲಿ ಮತ್ತೊಮ್ಮೆ ಜಾತಿವಾರು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಮರು ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರವು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ .




