ಬೆಳಗಾವಿ: ಸಿಮೆಂಟ್ ಲಾರಿ ಪಲ್ಟಿಯಾಗಿ ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನಲ್ಲಿ ನಡೆದಿದೆ.
ಹಾರೂಗೇರಿ ಬಳಿ ಈ ಘಟನೆ ನಡೆದಿದೆ. ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಸಿಮೆಂಟ್ ಲಾರಿ ಪಲ್ಟಿಯಾಗಿ ಬಿದ್ದಿದ್ದಿದೆ.5ನೇ ತರಗತಿ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕುಡುಚಿಕಡೆಯಿಂದ ಹಾರೂಗೇರ್ ಕಡೆಗೆ ಹೊರಟಿದ್ದ ಸಿಮೆಂಟ್ ಲಾರಿ ತಿರುವುನಲ್ಲಿ ಪಲ್ಟಿಯಾಗಿ ಬಿದ್ದು ಈ ದುರಂತ ಸಂಭವಿಸಿದೆ. 11 ವರ್ಷದ ಅಮಿತ್ ಕಾಂಬಳೆ ಮೃತ ವಿದ್ಯಾರ್ಥಿ. ಅಂಜಲಿ ಕಾಂಬಳೆ (15) ಹಾಗೂ ಅವಿನಾಶ್ ಕಾಂಬಳೆ (14) ಗಂಭೀರವಾಗಿ ಗಾಯಗೊಂಂಡಿದ್ದಾರೆ. ಕುಡುಚಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




