Ad imageAd image

ಮಂತ್ರಾಲಯದಿಂದ ಮರಳುತ್ತಿದ್ದ ವೇಳೆ ಭೀಕರ ಅಪಘಾತ : 8 ಮಂದಿ ಭಕ್ತರು ಸ್ಥಳದಲ್ಲೇ ಸಾವು

Bharath Vaibhav
ಮಂತ್ರಾಲಯದಿಂದ ಮರಳುತ್ತಿದ್ದ ವೇಳೆ ಭೀಕರ ಅಪಘಾತ : 8 ಮಂದಿ ಭಕ್ತರು ಸ್ಥಳದಲ್ಲೇ ಸಾವು
WhatsApp Group Join Now
Telegram Group Join Now

ರಾಯಚೂರು/ಮಂತ್ರಾಲಯ: ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ಮರಳುತ್ತಿದ್ದ ಭಕ್ತರ ಬಾಳಿನಲ್ಲಿ ವಿಧಿ ಅಟ್ಟಹಾಸ ಮೆರೆದಿದೆ.

ಮಂತ್ರಾಲಯದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಿಕ್ಕಬಳ್ಳಾಪುರ ಮೂಲದ ಎಂಟು ಮಂದಿ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಮಂತ್ರಾಲಯಕ್ಕೆ ತೆರಳಿದ್ದ ಭಕ್ತರು ಸಂಚರಿಸುತ್ತಿದ್ದ ಬೊಲೆರೊ ವಾಹನಕ್ಕೆ, ವೇಗವಾಗಿ ಬಂದ ಸಿಮೆಂಟ್ ಮತ್ತು ಜಲ್ಲಿಕಲ್ಲು ಸಾಗಿಸುತ್ತಿದ್ದ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೊಲೆರೊ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಮೃತರ ಹಿನ್ನೆಲೆ: ಮೃತಪಟ್ಟವರೆಲ್ಲರೂ ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ನಿವಾಸಿಗಳು ಎಂದು ಗುರುತಿಸಲಾಗಿದೆ.ಟ್ಯಾಂಕರ್ ಡಿಕ್ಕಿಯಾದ ರಭಸಕ್ಕೆ ಬೊಲೆರೊ ವಾಹನ ಅಪ್ಪಚ್ಚಿಯಾಗಿದ್ದು, ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!