Ad imageAd image

ಹಿರೇಮಾಗಿಯಲ್ಲಿ ತಾಯಿ ಹೆಸರಿನಲ್ಲಿ ಒಂದು ವೃಕ್ಷ ಅಭಿಯಾನ

Bharath Vaibhav
ಹಿರೇಮಾಗಿಯಲ್ಲಿ ತಾಯಿ ಹೆಸರಿನಲ್ಲಿ ಒಂದು ವೃಕ್ಷ ಅಭಿಯಾನ
WhatsApp Group Join Now
Telegram Group Join Now

ಬಾಗಲಕೋಟೆ : ಹುನಗುಂದ ತಾಲ್ಲೂಕಿನ ಹಿರೇಮಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಬ್ಬಿನ ಕಣಿವೆಯ ಪ್ರಾಥಮಿಕ ಶಾಲೆಯಲ್ಲಿ ತಾಲೂಕ ಪಂಚಾಯತಿ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ತಾಯಿ ಹೆಸರಿನಲ್ಲಿ ಒಂದು ವೃಕ್ಷ ಅಭಿಯಾನಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶೇಖರಪ್ಪ ಚಂದ್ರಗಿರಿ ಹಾಗೂ ಎಸ್ ಡಿಎಂಸಿ ಅಧ್ಯಕ್ಷ ಭೀಮಪ್ಪ ಗಂಜಿಹಾಳ ಅವರು ವಿವಿಧ ಬಗೆಯ ಸಸಿಗಳನ್ನು ನೆಟ್ಟು ನೀರು ಉಣಿಸಿದರು.

ಇನ್ನು ಶಾಲಾ ಮಕ್ಕಳು ಸ್ವ ಇಚ್ಛೆಯಿಂದ ತಮಗೆ ಇಷ್ಟದ ಸಸಿಗಳನ್ನು ತೆಗೆದುಕೊಂಡು ಶಾಲಾ ಆವರಣದಲ್ಲಿ ನೆಟ್ಟು ನೀರುಣಿಸಿದರು.

ಈ ಸಂದರ್ಭದಲ್ಲಿ ಐಇಸಿ ಸಂಯೋಜಕ ಬಸವರಾಜ ಕೊಪ್ಪದ , ಗ್ರಾಪಂ ಅಭಿವೃದ್ಧಿ ಅಧಿಕಾರಿ ಶೇಖರಪ್ಪ ಚಂದ್ರಗಿರಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೀಲಮ್ಮ ಹುಲ್ಲಿಕೇರಿ, ಎಸ್ ಡಿಎಂಸಿ ಅಧ್ಯಕ್ಷ ಭೀಮಪ್ಪ ಗಂಜಿಹಾಳ, ಎಸ್ ಡಿಎಂಸಿ ಉಪಾಧ್ಯಕ್ಷ ವಾರೇಶ್ ರಾಠೋಡ, ಶಾಲಾ ಹೆಡ್ ಮಾಸ್ಟರ್ ಎಸ್ ಪಿ. ನಿಡಗುಂದಿ, ಶಿಕ್ಷಕಿ ಕೆ. ಎಸ್. ಮಾಶ್ಯಾಳ, ಕಾಯಕಮಿತ್ರ ಮಹಾದೇವಿ ಬಿಸಿಲದಿನ್ನಿ , ತಾಂಡಾ ರೋಜಗಾರ್ ಮಿತ್ರ ಕಾವೇರಿ ಚವ್ಹಾಣ, ಅಡುಗೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

 

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!