ಬೆಂಗಳೂರು: ಬಸ್ ಗಾಗಿ ಕಾಯುತ್ತಿದ್ದ ಮಹಿಳೆಯನ್ನು ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಕೆಆರ್ ಮಾರುಕಟ್ಟೆಯಲ್ಲಿ ತಡರಾತ್ರಿ ನಡೆದಿದೆ.
ದುಷ್ಕರ್ಮಿಗಳು ಮಹಿಳೆಯನ್ನು ಬೆದರಿಸಿ ಅತ್ಯಾಚಾರ ಎಸಗಿ ಮೊಬೈಲ್, ಹಣ, ತಾಳಿ ಸರ ಕಸಿದುಕೊಂಡು ಹೋಗಿದ್ದಾರೆ.ಕೆಆರ್ ಮಾರುಕಟ್ಟೆಯ ಗೋಡೌನ್ ಸ್ಟ್ರೀಟ್ ನಲ್ಲಿ ಈ ಕೃತ್ಯ ನಡೆಸಲಾಗಿದೆ.
ಮಹಿಳೆ ಭಾನುವಾರ ಯಲಹಂಕಕ್ಕೆ ಹೋಗಲು ರಾತ್ರಿ ಕೆಆರ್ ಮಾರುಕಟ್ಟೆಯಲ್ಲಿ ಕಾಯುತ್ತಿದ್ದ ವೇಳೆ ಅಪರಿಚಿತರಿಬ್ಬರು ಅಲ್ಲಿಗೆ ಬಂದಿದ್ದು, ಮಹಿಳೆ ಅವರಿಗೆ ಬಸ್ ಬಗ್ಗೆ ವಿಚಾರಿಸಿದ್ದಾರೆ. ಬಸ್ ತೋರಿಸುವುದಾಗಿ ದುಷ್ಕರ್ಮಿಗಳು ಗೋಡೌನ್ ಸ್ಟ್ರೀಟ್ ಗೆ ಕರೆದೊಯ್ದು ಅತ್ಯಾಚಾರ ಎಸಗಿ ಬಳಿಕ ಮಹಿಳೆಯನ್ನು ಬೆದರಿಸಿ ಮೊಬೈಲ್, ಹಣ, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ಈ ಕುರಿತಾಗಿ ಮಹಿಳೆ ಕೇಂದ್ರ ವಿಭಾಗದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಶಂಕಿತನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.




