Ad imageAd image

ಕಂಡಕ್ಟರ್ ಆಗಿದ್ದ ಮಹಿಳೆಯನ್ನು ಬರ್ಬರವಾಗಿ ಕೊಲೆಗೈದ ಪತಿ 

Bharath Vaibhav
ಕಂಡಕ್ಟರ್ ಆಗಿದ್ದ ಮಹಿಳೆಯನ್ನು ಬರ್ಬರವಾಗಿ ಕೊಲೆಗೈದ ಪತಿ 
WhatsApp Group Join Now
Telegram Group Join Now

ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ ಆಗಿದ್ದು, ಕಂಡಕ್ಟರ್ ಆಗಿದ್ದ ಮಹಿಳೆಯನ್ನು ಪತಿಯೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು,ರಸ್ತೆ ಸಾರಿಗೆ ಸಂಸ್ಥೆಯಲ್ಲಿ ನಿರ್ವಾಹಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾಶವ್ವ ಕರೀಕಟ್ಟಿ (34) ಅವರನ್ನು ಅವರ ಪತಿ ನಿಪ್ಪಾಣಿ ಠಾಣೆ ಕಾನ್ಸ್ಟೆಬಲ್ ಸಂತೋಷ ಕಾಂಬಳೆ (35) ಕೊಲೆ ಮಾಡಿದ್ದಾರೆ.

ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ಕಾಶವ್ವ ಮತ್ತು ಸಂತೋಷ 2013ರಲ್ಲಿ ವಿವಾಹವಾಗಿದ್ದರು. ಕಾಶವ್ವ ಅವರು ನಿಪ್ಪಾಣಿಯಿಂದ ಸವದತ್ತಿ ಡಿಪೊಗೆ ವರ್ಗಾವಣೆ ಪಡೆದುಕೊಂಡಿದ್ದರು.

ಸವದತ್ತಿಯ ರಾಮಾಪುರ ಬಡಾವಣೆ ಮನೆಯಲ್ಲಿ ವಾಸವಾಗಿದ್ದರು. ಪತಿ ಸಂತೋಷನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹೀಗಾಗಿ ಸಂತೋಷ್ ಅವರನ್ನು ಪೊಲೀಸ್ ಸೇವೆಯಿಂದ ಅಮಾನತು ಮಾಡಲಾಗಿತ್ತು.

ಆಕ್ಟೋಬರ್ 13 ರಂದು ಸಂತೋಷ್ ಕಾಶವ್ವ ಮನೆಗೆ ಹೋಗಿದ್ದ ವೇಳೆ ಇಬ್ಬರ ನಡುವೆ ಜಗಳವಾಗಿತ್ತು. ಬಳಿಕ ಮಾರಕಾಸ್ತ್ರದಿಂದ ಕಾಶವ್ವಗೆ ಇರಿದು ಕೊಲೆ ಮಾಡಿ ಬೀಗ ಹಾಕಿಕೊಂಡು ಸಂತೋಷ್ ಪರಾರಿಯಾಗಿದ್ದ. ನಾಲ್ಕೈದು ದಿನಗಳ ನಂತರ ದುರ್ನಾತ ಬೀರುತ್ತಿದ್ದ ಶವ ಪತ್ತೆಯಾಗಿದ್ದು, ಕೊಲೆ ಆರೋಪಿ ಸಂತೋಷ್ ನನ್ನು ಸವದತ್ತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!