ಹಾವೇರಿ: ಮದುವೆಯಾಗಲು ಕನ್ನೆ ಸಿಗಲಿಲ್ಲವೆಂದು ಯುವ ರೈತರೊಬ್ಬರು(Farmer) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಳ್ಳಿಹಾಳ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಗ್ರಾಮದ ಪ್ರಕಾಶ ಬಸವರಾಜ ಹೂಗಾರ (35) ಮೃತ ರೈತ. ಇವರು 10-12 ವರ್ಷಗಳಿಂದ ಮದುವೆ ಮಾಡಿಕೊಳ್ಳಲೆಂದು ಕನ್ನ ಹುಡುಕುತ್ತಿದ್ದರು.
ಆದರೆ, ಯಾವುದ ಕನ್ನೆ ಸಿಗದ ಕಾರಣ ಮನನೊಂದು ಮನೆಯಲ್ಲಿಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.