Ad imageAd image

ಪೊಲೀಸರ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆ 

Bharath Vaibhav
ಪೊಲೀಸರ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆ 
WhatsApp Group Join Now
Telegram Group Join Now

ವಿಜಯಪುರ : ಪೊಲೀಸ್ ವಿಚಾರಣೆಗೆ ಹೆದರಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಮೌನೇಶ್ ಅಬ್ಬಿಹಾಳ್ ಎಂದು ಗುರುತಿಸಲಾಗಿದೆ.

ಮೌನೇಶ್ ನ ಸೋದರಮಾವ ಬಸವರಾಜ್ ಎನ್ನುವವರು ಕಳೆದ ಕೆಲವು ದಿನಗಳ ಹಿಂದೆ ಕಾಣೆಯಾಗಿದ್ದರು.ಈ ಸಂಬಂಧ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಮೌನೇಶ್‌ನನ್ನು ಠಾಣೆಗೆ ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದರು.

ಗುರುವಾರ ಸಹ ಮತ್ತೆ ವಿಚಾರಣೆಗೆ ಬರುವಂತೆ ಹೇಳಿದ್ದರು. ಆದರೆ ವಿಚಾರಣೆಗೆ ಹೆದರಿ ಯುವಕ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದಾನೆ ಎಂದು ಯುವಕನ ಕುಟುಂಬಸ್ಥರು ಆರೋಪಿಸಿದ್ದಾರೆ.

ಯುವಕ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವಾರು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

WhatsApp Group Join Now
Telegram Group Join Now
Share This Article
error: Content is protected !!