Ad imageAd image

ಗ್ಯಾರಂಟಿಗಳ ಭ್ರಮೆಯಲ್ಲಿ ಎಎಪಿ, 27 ವರ್ಷಗಳ ನಂತರ ಬಿಜೆಪಿ ಅಧಿಕಾರಕ್ಕೆ:ಬಿ ವೈ ವಿಜಯೇಂದ್ರ

Bharath Vaibhav
ಗ್ಯಾರಂಟಿಗಳ ಭ್ರಮೆಯಲ್ಲಿ ಎಎಪಿ, 27 ವರ್ಷಗಳ ನಂತರ ಬಿಜೆಪಿ ಅಧಿಕಾರಕ್ಕೆ:ಬಿ ವೈ ವಿಜಯೇಂದ್ರ
WhatsApp Group Join Now
Telegram Group Join Now

ಬೆಂಗಳೂರು: ದೆಹಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಏರುವ ವಿಶ್ವಾಸವಿದೆ. ದೆಹಲಿ ರಾಜ್ಯದ ಚುನಾವಣೆ ನಿನ್ನ ನಡೆದಿದೆ. 9-10 ಸಮೀಕ್ಷೆಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದಂತೆ 27 ವರ್ಷಗಳ ನಂತರ ದೆಹಲಿ ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಗ್ಯಾರಂಟಿಗಳ ಭ್ರಮೆಯಲ್ಲಿದ್ದ ಆಮ್ ಆದ್ಮ ಪಾರ್ಟಿಗೆ ತಕ್ಕ ಪಾಠವನ್ನು ಆ ರಾಜ್ಯದ ಜನರು ಕಲಿಸುತ್ತಾರೆ. ಭ್ರಷ್ಟಾಚಾರದ ವಿರುದ್ಧ ಆಂದೋಲನ ಮಾಡಿ, ರಾಜ್ಯದ ಚುಕ್ಕಾಣಿ ಹಿಡಿದ ಆಮ್ ಆದ್ಮ ಪಾರ್ಟಿಗೆ ತಕ್ಕ ಉತ್ತರವನ್ನು ನೀಡಿದ್ದಾರೆ. ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುವ ವಿಶ್ವಾಸ ನಮಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎ ವಿಜಯೇಂದ್ರ ಅವರು ಹೇಳಿದರು.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ವಿಜಯಂದ್ರ ಅವರು, ಕೇಂದ್ರದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಅತ್ಯುತ್ತಮ ಬಜೆಟ್ ಅನ್ನು ಮಂಡನೆ ಮಾಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರ ವಿಕಸಿತ ಭಾರತದ ಕನಸು ನನಸಾಗುವ ನಿಟ್ಟಿನಲ್ಲಿ ಅಭಿವೃದ್ಧಿಗೆ ಪೂರಕವಾದ, ಬಡವರು, ರೈತರು, ಯುವಕರು, ಮಹಿಳೆಯರ ಪರವಾಗಿ ಒಂದು ಅತ್ಯುತ್ತಮ ಬಜೆಟ್ ಅನ್ನು ನೀಡಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

12 ಲಕ್ಷದವರೆಗೆ ಆದಾಯ ತೆರಿಗೆ ಕಟ್ಟುವಂತಿಲ್ಲ ಎಂಬ ನಿರ್ಧಾರದಿಂದ ಮಧ್ಯಮ ವರ್ಗದವರಿಗೆ ಬಹಳಷ್ಟು ಅನುಕೂಲವಾಗಿದೆ, ಜನರ ಬಹುವರ್ಷಗಳ ನಿರೀಕ್ಷೆಗೆ ತಕ್ಕಂತೆ ಬಜೆಟ್ ಮಂಡಿಸಿದ್ದು, ಪ್ರತಿಯೊಬ್ಬರೂ ಸಂತಸ ಪಡುವ ವಿಚಾರ ಎಂದರು. ಸಿದ್ಧರಾಮಯ್ಯನವರಿಂದ ಕೇಂದ್ರದ ಬಜೆಟ್ ಬಗ್ಗೆ ಒಳ್ಳೆಯ ಮಾತು ಕೇಳಲು ಸಾಧ್ಯವಿಲ್ಲ, ಸಹಜವಾಗಿ ಅವರು ಟೀಕೆಗಳನ್ನು ಮಾಡಿದ್ದಾರೆ. ಕರ್ನಾಟಕವೂ ಸೇರಿದಂತೆ ದೇಶದ
ಪ್ರತಿಯೊಂದು ರಾಜ್ಯದಲ್ಲೂ ಸಹ ಈ ಬಜೆಟ್ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ ಎಂದು ನುಡಿದರು.

WhatsApp Group Join Now
Telegram Group Join Now
Share This Article
error: Content is protected !!