Ad imageAd image

ಜುಲೈ 4ರವರೆಗೆ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳು ಜೈಲಿಗೆ 

Bharath Vaibhav
ಜುಲೈ 4ರವರೆಗೆ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳು ಜೈಲಿಗೆ 
WhatsApp Group Join Now
Telegram Group Join Now

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳು ಜೈಲು ಪಾಲಾಗಿದ್ದು, ಜು.4 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.

ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದರು.

ವಿಚಾರಣೆ ನಡೆಸಿದ ಕೋರ್ಟ್ , ಜು.4 ರವರೆಗೆ 12 ದಿನ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.

ದರ್ಶನ್ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎಂದು ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಬೆಂಗಳೂರಿಗೆ ಕರೆತಂದಿದ್ದ ಡಿ ಗ್ಯಾಂಗ್ ರೇಣುಕಾ ಸ್ವಾಮಿ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿ ಆರೋಪಿಗಳು ಚಿತ್ರ ಹಿಂಸೆ ನೀಡಿದ್ದರು.

ಅಲ್ಲದೇ ಮೆಗ್ಗರ್ ಸಾಧನ ಬಳಸಿ ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ನೀಡಿ, ಚಿತ್ರಹಿಂಸೆ ನೀಡಿ, ಮನಸೋ ಇಚ್ಚೆ ಹಲ್ಲೆ ನಡೆಸಿ ಕೊಂದು ವಿಕೃತಿ ಮೆರೆದಿದ್ದರು. ಪ್ರಕರಣ ಸಂಬಂಧ ನಟ ದರ್ಶನ್ ಸೇರಿ ಹಲವರನ್ನು ಪೊಲೀಸರು ಬಂಧಿಸಿದ್ದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!