Ad imageAd image

ರೇಣುಕಾಸ್ವಾಮಿ ಕೊಲೆ ಪ್ರಕರಣ ಮುಚ್ಚಿ ಹಾಕಲು ನಟ ದರ್ಶನ್ 40 ಲಕ್ಷ ರೂ. ಸಾಲ 

Bharath Vaibhav
WhatsApp Group Join Now
Telegram Group Join Now

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಅರೆಸ್ಟ್‌ ಆಗಿರುವ ನಟ ದರ್ಶನ್‌ ಕೊಲೆ ಪ್ರಕರಣದಿಂದ ಪಾರಾಗಲು ಹಾಗೂ ಸಾಕ್ಷ್ಯ ನಾಶ ಮಾಡಲು 40 ಲಕ್ಷ ರೂಪಾಯಿ ಸಾಲ ಮಾಡಿದ್ದರು ಎಂದು ಪೊಲೀಸ್‌ ತನಿಖೆ ವೇಳೆ ತಿಳಿದುಬಂದಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಿಂದ ಪಾರಾಗಲು ಹಾಗೂ ಇತರೆ ಆರೋಪಿಗಳ ಮೂಲಕ ಸಾಕ್ಷ್ಯನಾಶ ಮಾಡಲು ನಟ ದರ್ಶನ್‌, ತನ್ನ ಸ್ನೇಹಿತ ಮೋಹನ್‌ರಾಜ್‌ ಎಂಬವರ ಕಡೆಯಿಂದ 40 ಲಕ್ಷ ರೂ.ಸಾಲ ಪಡೆದುಕೊಂಡಿದ್ದರು ಎನ್ನಲಾಗಿದ್ದು, 40 ಲಕ್ಷ ರೂಪಾಯಿ ಪೈಕಿ 37.40 ಲಕ್ಷವನ್ನು ರಾಜರಾಜೇಶ್ವರಿನಗರದಲ್ಲಿರುವ ದರ್ಶನ್‌ ಮನೆಯಲ್ಲಿ ಪೊಲೀಸರು ಜಪ್ತಿ ಮಾಡಿದ್ದಾರೆ. ಜೊತೆಗೆ, ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಪತಿ ನೀಡಿದ್ದ 3 ಲಕ್ಷ ರೂ. ಹಾಗೂ ಇತರೆ ವಸ್ತುಗಳನ್ನು ಪ್ರಕರಣದ ತನಿಖಾ ತಂಡಕ್ಕೆ ತಂದುಕೊಟ್ಟಿದ್ದಾರೆ ಎನ್ನಲಾಗಿದೆ.

ಕೊಲೆ ಪ್ರಕರಣದಲ್ಲಿ ಮುಂದಿನ ದಿನಗಳಲ್ಲಿ ಸಂಕಷ್ಟ ಎದುರಾಗುವ ಮುನ್ಸೂಚನೆ ಇತ್ತು. ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು, ಬೇರೆಯವರನ್ನು ಠಾಣೆಗೆ ಶರಣು ಮಾಡಿಸಲು ಹಾಗೂ ಸಾಕ್ಷ್ಯ ನಾಶ ಮಾಡಲು ಹಣದ ಅಗತ್ಯವಿತ್ತು. ಸ್ನೇಹಿತ ಮೋಹನ್ ರಾಜ್ ಕಡೆಯಿಂದ 40 ಲಕ್ಷ ಪಡೆದುಕೊಂಡು ಮನೆಯಲ್ಲಿಟ್ಟುಕೊಂಡಿದ್ದೆ ಎಂಬುದಾಗಿ ದರ್ಶನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ಹೇಳಿವೆ.

 

 

WhatsApp Group Join Now
Telegram Group Join Now
Share This Article
error: Content is protected !!