Ad imageAd image
- Advertisement -  - Advertisement -  - Advertisement - 

ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್ : ಹೊಸ ಕೈದಿ ನಂಬರ್ ಹಂಚಿಕೆ 

Bharath Vaibhav
ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್ : ಹೊಸ ಕೈದಿ ನಂಬರ್ ಹಂಚಿಕೆ 
WhatsApp Group Join Now
Telegram Group Join Now

ಬಳ್ಳಾರಿ: ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಆಗಿರುವ ಕೊಲೆ ಆರೋಪಿ ನಟ ದರ್ಶನ್ ಗೆ ಹೊಸ ಕೈದಿ ನಂಬರ್ ನೀಡಲಾಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ನಟ ದರ್ಶನ್ ಗೆ ರಾಜಾತಿಥ್ಯ ನೀಡಲಾಗುತ್ತಿದ್ದ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ನಟ ದರ್ಶನ್ ನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಡಲಾಗಿದೆ.

ಬಿಗಿ ಪೊಲೀಸ್ ಭದ್ರತೆಯಲ್ಲಿ ನಟ ದರ್ಶನ್ ನನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ. ಬಳ್ಳಾರಿ ಜೈಲಿಗೆ ಕರೆತರುತ್ತಿದಂತೆ ಆರೋಪಿ ಹೆಸರು, ಪ್ರಕರಣ ಸೇರಿದಂತೆ ವಿವಿಧ ಮಾಹಿತಿಗಳನ್ನು ದಾಖಲಿಸಿಕೊಂಡ ಜೈಲಧಿಕಾರಿಗಳು ದರ್ಶನ್ ಗೆ ಹೊಸ ಕೈದಿ ನಂಬರ್ ನೀಡಿದ್ದಾರೆ.

ಬಳ್ಳಾರಿ ಜೈಲಿನಲ್ಲಿ ದರ್ಶನ್ ಗೆ ವಿಚಾರಣಾಧೀನ ಕೈದಿ ನಂ.511 ಸಂಖ್ಯೆ ನಿಡಲಾಗಿದೆ. ಈ ಹಿಂದೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಗೆ 6106 ವಿಚಾರಣಾಧೀನ ಕೈದಿ ನಂಬರ್ ನೀಡಲಾಗಿತ್ತು. ಇದೀಗ ಬಳ್ಳಾರಿ ಜೈಲಿನಲ್ಲಿ ಬೇರೆ ನಂಬರ್ ನೀಡಲಾಗಿದೆ.

WhatsApp Group Join Now
Telegram Group Join Now
Share This Article
error: Content is protected !!