Ad imageAd image
- Advertisement -  - Advertisement -  - Advertisement - 

ಏಕೈದಿಯ ಸ್ಟೈಲ್ ನೋಡಿ ಕೈಯಲ್ಲಿ ಸಿಗರೇಟು ಮುಖದಲ್ಲಿ ಮಂದಹಾಸ ಬಿಂದಾಸ್ ಆಗಿರುವ ನಟ ದರ್ಶನ್

Bharath Vaibhav
ಏಕೈದಿಯ ಸ್ಟೈಲ್ ನೋಡಿ ಕೈಯಲ್ಲಿ ಸಿಗರೇಟು ಮುಖದಲ್ಲಿ ಮಂದಹಾಸ ಬಿಂದಾಸ್ ಆಗಿರುವ ನಟ ದರ್ಶನ್
WhatsApp Group Join Now
Telegram Group Join Now

ಬೆಂಗಳೂರು :-ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಚಿತ್ರನಟ ದರ್ಶನ್ ನದ್ದೆ ಎನ್ನಲಾದ ಪೋಟೋ ವೈರಲ್ ಆಗಿದ್ದು, ಕೈಯಲ್ಲಿ ಚಹಾ ಜೊತೆಗೆ ಸಿಗರೇಟು ಹಿಡಿದು ಕುಳಿತಿರುವ ಪೋಟೋ ವೈರಲ್ ಆಗಿದ್ದು, ಜೈಲು ಅಧಿಕಾರಿಗಳ ಮೇಲೆ ಅನುಮಾನ ಮೂಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ ಮನೆ ಊಟಕ್ಕಾಗಿ ಅರ್ಜಿ ಸಲ್ಲಿಸಿದ್ದರೂ, ಮನೆ ಊಟ ಕೊಡಲು ಸಾಧ್ಯವಿಲ್ಲ ಎಂದು ಪರಪ್ಪನ ಅಗ್ರಹಾರ ಜೈಲಿನ ಅಧಿಕಾರಿಗಳು ಹೇಳಿದ್ದರು.

ಆದರೆ ಇದೀಗ ದರ್ಶನ್‌ ವಿಲ್ಸನ್ ಗಾರ್ಡನ್‌ ನಾಗನ ಜೊತೆ ಪರಪ್ಪನ ಅಗ್ರಹಾರದಲ್ಲಿ ಸಿಗರೇಟು ಸೇದುತ್ತಾ, ಟೀ ಕುಡಿಯುತ್ತಾ ಹರಟೆ ಹೊಡೆಯುತ್ತಿರುವ ಫೋಟೊ ವೈರಲ್ ಆಗಿದ್ದು, ಪರಪ್ಪನ ಅಗ್ರಹಾರದಲ್ಲಿ ಕೂಡ ದರ್ಶನ್‌ಗೆ ರಾಜಾಥಿತ್ಯ ಸಿಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ.

65 ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ತೂಗುದೀಪ, ಮನೆ ಊಟ ಇಲ್ಲದೆ ತೂಕ ಕಳೆದುಕೊಂಡಿದ್ದಾರೆ. ಧ್ಯಾನ ಮಾಡುತ್ತಿದ್ದಾರೆ, ಮಾಡಿದ ತಪ್ಪಿಗೆ ಪಶ್ಚಾತಾಪ ಪಡುತ್ತಿದ್ದಾರೆ ಎಂದೆಲ್ಲಾ ಹೇಳಲಾಗಿತ್ತು, ಆದರೆ ಇದೀಗ ವೈರಲ್ ಆಗಿರುವ ಫೋಟೊ ನೋಡಿದರೆ ಎಲ್ಲವೂ ಸುಳ್ಳು ಎನ್ನುವ ಅನುಮಾನ ಮೂಡುತ್ತಿದೆ. ದರ್ಶನ್ ಜೈಲಿನಲ್ಲಿ ಕೂಡ ಆರಾಮಾಗಿ ಕಾಲ ಕಳೆಯುತ್ತಿದ್ದು, ಸಿಗರೇಟು ಸೇದುತ್ತಾ ಕಾಫಿ ಕುಡಿಯುತ್ತಿರುವ ಫೋಟೊ ಅದಕ್ಕೆ ಸಾಕ್ಷಿಯಾಗಿದೆ.

ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನ ಜೊತೆ ದರ್ಶನ್ ಸಿಗರೇಟು ಸೇದುತ್ತಾ ಹರಟೆ ಹೊಡೆಯುತ್ತಿದ್ದಾರೆ. ಆತನ ಜೊತೆ ವಿಚಾರಣಾಧೀನ ಖೈದಿಯಾಗಿರುವ ಮ್ಯಾನೇಜರ್ ನಾಗರಾಜ್ ಕೂಡ ಇದ್ದಾನೆ, ಮತ್ತೊಬ್ಬನನ್ನು ಕುಳ್ಳ ಸೀನ ಎಂದು ಗುರುತಿಸಲಾಗಿದೆ.

ವರದಿ :-ರಾಜು ಮುಂಡೆ

WhatsApp Group Join Now
Telegram Group Join Now
Share This Article
error: Content is protected !!