Ad imageAd image

7 ದಿನಗಳ ಬಳಿಕ ಎಚ್. ಡಿ. ರೇವಣ್ಣಗೆ ಬಿಡುಗಡೆ ಭಾಗ್ಯ

Bharath Vaibhav
7 ದಿನಗಳ ಬಳಿಕ ಎಚ್. ಡಿ. ರೇವಣ್ಣಗೆ ಬಿಡುಗಡೆ ಭಾಗ್ಯ
hd revanna
WhatsApp Group Join Now
Telegram Group Join Now

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ 7 ದಿನಗಳ ನಂತರ ಬಿಡುಗಡೆ ಭಾಗ್ಯ ಸಿಕ್ಕಿದೆ.

ಇದರೊಂದಿಗೆ ಹೆಚ್.ಡಿ. ರೇವಣ್ಣಗೆ ರಿಲೀಫ್ ಸಿಕ್ಕಿದೆ. ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ಸಂತ್ರಸ್ತೆಯ ಅಪಹರಣ ಕೇಸ್ ನಲ್ಲಿ ಬಂಧಿತರಾಗಿದ್ದ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ.

ಪರಪ್ಪನ ಅಗ್ರಹಾರ ಜೈಲಿನಿಂದ ರೇವಣ್ಣ ನಾಳೆ ಬಿಡುಗಡೆಯಾಗುವ ಸಾಧ್ಯತೆ ಇದೆ. 5 ಲಕ್ಷ ರೂಪಾಯಿ ಬಾಂಡ್, ಇಬ್ಬರ ಶ್ಯೂರಿಟಿ ನೀಡಬೇಕು. ಸಾಕ್ಷ್ಯಾಧಾರ ನಾಶಪಡಿಸಬಾರದು. ಎಸ್‌ಐಟಿ ತನಿಖೆಗೆ ಸಹಕರಿಸಬೇಕು. ಮಂಡ್ಯ ಜಿಲ್ಲೆ ಕೆಆರ್ ನಗರ ತಾಲೂಕು ಪ್ರವೇಶಿಸಬಾರದು ಎಂದು ಷರತ್ತು ವಿಧಿಸಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!