ಕಲಬುರ್ಗಿ : ಜಿಲ್ಲೆಯ ರಾವುರ್ ಗ್ರಾಮದಲ್ಲಿ ಶಿವಾಜಿ ಜಯಂತಿ ಮೆರವಣಿಗೆಯ ಸಂದರ್ಭದಲ್ಲಿ ಸೌಂಡ್ ಬಾಕ್ಸ್ ವಿಚಾರವಾಗಿ ಎರಡು ಸಮುದಾಯಗಳ ನಡುವೆ ಸಂಘರ್ಷ ನಡೆದಿದೆ.ರಾವುರ್ ಗ್ರಾಮದ ಗೋಕುಲ್ ನಗರದ ಗಣೇಶ್ ಕಟ್ಟಿ ಪ್ರದೇಶದಲ್ಲಿ ಘಟನೆ ನಡೆದಿದೆ.
ಗಣೇಶ್ ಕಟ್ಟಿ ಮೇಲೆ ಛತ್ರಪತಿ ಶಿವಾಜಿ ಮಹಾರಾಜರ ಫೋಟೋ ಇಟ್ಟು ಆಚರಣೆ ಮಾಡಲಾಗುತ್ತಿತ್ತು.ಈ ಸಂದರ್ಭದಲ್ಲಿ ಸೌಂಡ್ ಬಾಕ್ಸ್ ಹಚ್ಚಿ ಡ್ಯಾನ್ಸ್ ಮಾಡುವಾಗ ಮತ್ತೊಂದು ಸಮುದಾಯದವರು ಸೌಂಡ್ ಕಡಿಮೆ ಮಾಡುವಂತೆ ಸೂಚಿಸಿದ್ದಾರೆ.
ಸೌಂಡ್ ಕಡಿಮೆ ಮಾಡುವ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು, ಎರಡು ಗುಂಪುಗಳ ನಡುವೆ ಗಲಾಟೆ ಆರಂಭವಾಗಿದೆ. ಈ ವೇಳೆ ಜನರು ಪರಸ್ಪರ ಕಲ್ಲು ಮತ್ತು ಕಟ್ಟಿಗೆಗಳಿಂದ ಹೊಡೆದಾಡಿಕೊಂಡಿದ್ದಾರೆ.
ಈ ಮಾರಾಮಾರಿಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.ಸದ್ಯದ ಮಾಹಿತಿಯ ಪ್ರಕಾರ, ಈ ಘಟನೆಗೆ ಸಂಬಂಧಿಸಿದಂತೆ ಯಾವುದೇ ಸಮುದಾಯದವರೂ ಇದುವರೆಗೆ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿಲ್ಲ ಎಂದು ತಿಳಿದುಬಂದಿದೆ.ಕಲಬುರ್ಗಿಯ ಈ ಘಟನೆಯಿಂದಾಗಿ ಗ್ರಾಮದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಸಾಂದರ್ಭಿಕ ಚಿತ್ರ




