Ad imageAd image

ಅಪ್ಪ ಜನರಿಗಾಗಿ ಬದುಕಿದ ನಾಯಕ : ವಿನಯ್ ಕುಲಕರ್ಣಿ ಮಗಳ ಭಾವುಕ ಪೋಸ್ಟ್

Bharath Vaibhav
ಅಪ್ಪ ಜನರಿಗಾಗಿ ಬದುಕಿದ ನಾಯಕ : ವಿನಯ್ ಕುಲಕರ್ಣಿ ಮಗಳ ಭಾವುಕ ಪೋಸ್ಟ್
WhatsApp Group Join Now
Telegram Group Join Now

ಬೆಂಗಳೂರು: ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದ ಬೆನ್ನಲ್ಲೇ, ಅವರ ಪುತ್ರಿ ವೈಶಾಲಿ ಕುಲಕರ್ಣಿ ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ.

ತಮ್ಮ ತಂದೆಯೊಂದಿಗಿನ ಬಾಲ್ಯದ ಫೋಟೋವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ವೈಶಾಲಿ, ತಂದೆಯ ರಾಜಕೀಯ ಪಯಣ ಮತ್ತು ಅವರ ವ್ಯಕ್ತಿತ್ವವನ್ನು ಸ್ಮರಿಸಿ ಭಾವುಕರಾಗಿದ್ದಾರೆ.

ವೈಶಾಲಿ ಕುಲಕರ್ಣಿ ಪೋಸ್ಟ್ ನಲ್ಲಿ ಏನಿದೆ?

ಉತ್ತರ ಕರ್ನಾಟಕದಾದ್ಯಂತ, ವಿದ್ಯಾರ್ಥಿ ನಾಯಕರಿಂದ ರಾಜ್ಯ ನಾಯಕರಾಗುವವರೆಗೆ ಅವರ ಪಯಣವನ್ನು ಜನರು ಸಾಕ್ಷಿಯಾಗಿ ನೋಡಿದ್ದಾರೆ. ರೈತ ಕುಟುಂಬದಲ್ಲಿ ಜನಿಸಿ, ಸಾವಿರಾರು ಪಶುಗಳೊಂದಿಗಿನ ದೊಡ್ಡ ಡೈರಿ ಕಾರ್ಯಾಚರಣೆಯನ್ನು ನಿರ್ಮಿಸಿ ನಿರ್ವಹಿಸಿದವರು, ಯುವ ರೈತರಿಗೆ ಪ್ರೇರಣೆಯಾದವರು. ಅವರು ಯಾವಾಗಲೂ ಎಲ್ಲ ವಯಸ್ಸಿನ ಜನರೊಂದಿಗೆ ಸರಳವಾಗಿ ಬೆರೆತವರು, ಗೌರವದಿಂದ ವರ್ತಿಸಿದವರು ಮತ್ತು ಸಹಾಯಕ್ಕೆ ಸದಾ ಸಿದ್ಧರಾಗಿದ್ದವರು.

ಜನರಿಗಾಗಿ ಬದುಕಿದ ನಾಯಕನಾಗಿ, ಅವರು ತಮ್ಮ ಜೀವನವನ್ನೇ ಸಾರ್ವಜನಿಕ ಸೇವೆಗೆ ಅರ್ಪಿಸಿದ್ದಾರೆ. ಅನೇಕ ಕುಟುಂಬಗಳಿಗೆ ಅವರು ಕೇವಲ ನಾಯಕನಲ್ಲ, ತಮ್ಮವರಲ್ಲೊಬ್ಬರು.ನಾವು ಅವರನ್ನು ಯಾವಾಗಲೂ ಅವರ ಕೆಲಸಗಳಿಂದಲೇ ಗುರುತಿಸಿದ್ದೇವೆ.

ಅವರು ಎಂದೆಂದಿಗೂ ನಮ್ಮ ನಾಯಕ, ನಮ್ಮ ಮಾರ್ಗದರ್ಶಕ ಮತ್ತು ನಮ್ಮ ಅತಿ ದೊಡ್ಡ ಹೆಮ್ಮೆ. ನಾವು ದೃಢವಾಗಿದ್ದೇವೆ. ಅವರ ನೈತಿಕತೆ ಮತ್ತು ಸತ್ಯದ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಈ ವಿಷಯಕ್ಕೆ ಸಾರ್ವಜನಿಕ ಗಮನ ಮತ್ತು ವಿಭಿನ್ನ ಅಭಿಪ್ರಾಯಗಳು ಸಾಕಷ್ಟು ಬಂದಿವೆ ಎಂಬುದನ್ನೂ ನಾವು ಅರಿತಿದ್ದೇವೆ.

ನ್ಯಾಯಾಂಗ ಪ್ರಕ್ರಿಯೆಗೆ ನಾವು ಗೌರವ ನೀಡುತ್ತೇವೆ ಮತ್ತು ಮೇಲ್ಮನವಿ ನ್ಯಾಯಾಲಯಗಳತ್ತ ಪೂರ್ಣ ನಂಬಿಕೆಯಿಂದ ಮುಂದುವರಿಯುತ್ತಿದ್ದೇವೆ.

ನಮಗೆ ದೊರೆತಿರುವ ಪ್ರೀತಿ, ಪ್ರಾರ್ಥನೆಗಳು ಮತ್ತು ಬೆಂಬಲಕ್ಕಾಗಿ ನಾವು ಹೃತ್ತೂರ್ವಕ ಕೃತಜ್ಞತೆ ಸಲ್ಲಿಸುತ್ತೇವೆ. ಒಟ್ಟಾಗಿ, ನಾವು ಬಲವಾಗಿ ನಿಲ್ಲುತ್ತೇವೆ. ನಾವು ಇದನ್ನೂ ದಾಟುತ್ತೇವೆ. ಇದು ಕೂಡ ಸಾಗಿಹೋಗುತ್ತದೆ ಎಂದು ಬರೆದುಕೊಂಡಿದ್ದಾರೆ.

 

 

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!