ಬಾದಾಮಿ : ಮೂಲಭೂತ ಸೌಕರ್ಯ ಒದಗಿಸುವ ಹಾಗೂ ಸೇವಾ ಸೌಲಭ್ಯಗಳನ್ನು ಒದಗಿಸುವ ಕುರಿತು ತಾಲೂಕಾ ಆಡಳಿತ ಅಧಿಕಾರಿಗಳು ಬಾದಾಮಿ ಘಟಕದಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ಬೆಂಗಳೂರು. ತಾಲೂಕಾ ಆಡಳಿತ ಅಧಿಕಾರಿಗಳು ಬಾದಾಮಿ ಘಟಕದಿಂದ ಮೂಲಭೂತ ಸೌಕರ್ಯ ಒದಗಿಸುವ ಹಾಗೂ ಸೇವಾ ಸೌಲಭ್ಯಗಳನ್ನು ಒದಗಿಸುವ ಕುರಿತು ತಾಲೂಕಾ ಆಡಳಿತ ಅಧಿಕಾರಿಗಳು ಬಾದಾಮಿ ತಹಶೀಲ್ದಾರ್ ಕಛೇರಿ ಎದುರು ದಿನಾಂಕ 10/02/2025 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದಾರೆ.
ಈ ಕುರಿತು ಮಾಧ್ಯಮಗಳ ಎದುರು ತಾಲೂಕಾ ಆಡಳಿತ ಅಧಿಕಾರಿಗಳ ರಾಜ್ಯ ಸಂಘದ ಮಹಿಳಾ ಉಪಾಧ್ಯಕ್ಷೆ ಶ್ರೀಮತಿ ಕಲಾ. ಕೆ ಅವರು ಮಾತನಾಡಿ ಗ್ರಾಮ ಆಡಳಿತ ಅಧಿಕಾರಿಗಳು ಪಡುತ್ತಿರುವ ಸಂಕಷ್ಟಗಳನ್ನು ವಿವರವಾಗಿ ವಿವರಿಸಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಜೆ ಡಿ ಎಸ್ ನ ಜಿಲ್ಲಾಧ್ಯಕ್ಷರಾದ ಹನಮಂತ ಮಾವಿನಮರದ ಅವರು ಗ್ರಾಮ ಆಡಳಿತ ಅಧಿಕಾರಿಗಳ ಮನವಿಯನ್ನು ಪಡೆದು ನಮ್ಮ ನಾಯಕರಾದ ಕೇಂದ್ರ ಸಚಿವ ಕುಮಾರಸ್ವಾಮಿಯವರು ಹಾಗೂ ರಾಜ್ಯ ಸರಕಾರದ ಗಮನಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿ ನಿಮ್ಮ ಜೊತೆ ನಾವಿದ್ದೇವೆ ಎಂದು ಭರವಸೆ ನೀಡಿದರು.
ವರದಿ: ರಾಜೇಶ್. ಎಸ್. ದೇಸಾಯಿ