ಸಿಂಧನೂರು : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ವೃಂದದ ವತಿಯಿಂದ ಕೈಗೊಂಡ ಮುಷ್ಕರ ಯಾವುದೇ ಬೇಡಿಕೆಗಳನ್ನು ಈಡೇರಿಸಿದ ಕಾರಣ ರಾಜ್ಯ ವ್ಯಾಪ್ತಿ 2ನೇ ಹಂತದ ಮುಷ್ಕರ ಹಮ್ಮಿಕೊಂಡಿದ್ದು ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ವತಿಯಿಂದ ದಿನಾಂಕ 22. 9. 2024 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಭಾ ಭವನ ಚಿತ್ರದುರ್ಗದಲ್ಲಿ ನಡೆದ ರಾಜ್ಯ ಕಾರ್ಯಚರಣೆ ಸಭೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧ್ಯಕ್ಷರು ಪದಾಧಿಕಾರಿಗಳು ತಾಲೂಕ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಒಪ್ಪಿಗೆಯಂತೆ ಸರ್ವಾನುಮತದಿಂದ ದಿ:26.9.2024 ರಿಂದ ದಿ:3-10-2024 ರವರಿಗೆ ರಾಜ್ಯಾದ್ಯಂತ ಮುಷ್ಕರ ನಡೆಸಿದ ಕಾರಣ ಮಾನ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಕಂದಾಯ ಇಲಾಖೆ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಭರವಸೆ ನೀಡಿದ್ದರು .
ಅದರಂತೆ ಸದರಿ ದಿನದಿಂದಲೇ ರಾಜ್ಯ ವ್ಯಾಪ್ತಿ ಮುಷ್ಕರವನ್ನು ಹಿಂಪಡೆಯಲಾಗಿತ್ತು.
ಆದರೆ ಇಲ್ಲಿಯವರೆಗೂ ಯಾವುದೇ ಬೇಡಿಕೆಗಳು ಈಡೇರಿರುವುದಿಲ್ಲ ಆದ್ದರಿಂದ ಉಲ್ಲೇಖದ ಸಭೆಯಲ್ಲಿ ಮೇಲ್ಕಂಡ ಎಲ್ಲಾ ಕಾರಣಗಳಿಗಾಗಿ ಮುಷ್ಕರದ ಬೇಡಿಕೆಗಳು ಈಡೇರಿಕೆಗಾಗಿ ರಾಜ್ಯ ವ್ಯಾಪ್ತಿ ಅನಿರ್ದಿಷ್ಟವದಿ 2ನೇ ಹಂತದ ಮುಷ್ಕರವನ್ನು ದಿ :10.02.2025 ರಿಂದ ಎಲ್ಲ ಬಗೆಯ ಮೊಬೈಲ್ ಆಪ್ ವೆಬ್ ಅಪ್ಲಿಕೇಶನ್ ಲೇಖನಿ ಸ್ಥಗಿತಗೊಳಿಸಿ ರಾಜ್ಯ ವ್ಯಾಪ್ತಿ ಮುಷ್ಕರವನ್ನು ಹಮ್ಮಿಕೊಂಡಿದ್ದು ಇರುತ್ತದೆ.
ಈ ಸಂದರ್ಭದಲ್ಲಿ, ದೇವೇಂದ್ರ ಮೇಟಿ ವಿ ಎ ಓ ಅಧ್ಯಕ್ಷರು, ಶಿಲ್ಪಾ ಕಟ್ಟಿಮನಿ ಪ್ರಧಾನ ಕಾರ್ಯದರ್ಶಿ, ಸತೀಶ್ ಫರ್ಗೆ ಗೌರವಾಧ್ಯಕ್ಷರು, ವೀಣಾ ವಿಎಓ ಉಪಾಧ್ಯಕ್ಷರು, ಚಾಗಪ್ಪ ಹೂಗಾರ್ ವಿ ಎ ಓ ಉಪಾಧ್ಯಕ್ಷರು, ಸಿದ್ದು ಸಾಲಕ್ಕಿ ಸಹಕಾರದರ್ಶಿ ಇನ್ನು ಅನೇಕರಿದ್ದರು.
ವರದಿ:ಬಸವರಾಜ ಬುಕ್ಕನಹಟ್ಟಿ