Ad imageAd image

ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ : ಕಾಲುವೆಗೆ ತಳ್ಳಿ ಪ್ರೇಯಸಿ ಹತ್ಯೆ

Bharath Vaibhav
ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ : ಕಾಲುವೆಗೆ ತಳ್ಳಿ ಪ್ರೇಯಸಿ ಹತ್ಯೆ
WhatsApp Group Join Now
Telegram Group Join Now

ಶಿವಮೊಗ್ಗ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು, ಭದ್ರಾ ಕಾಲುವೆಗೆ ಪ್ರೇಯಸಿಯನ್ನು ತಳ್ಳಿ ಪ್ರಿಯಕರ ಹತ್ಯೆಗೈದಿರುವ ಆರೋಪ ಕೇಳಿಬಂದಿದೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಯಕ್ಕುಂದದ ಬಳಿ ಸ್ವಾತಿ ಎನ್ನುವ ಯುವತಿಯ ಶವ ಪತ್ತೆಯಾಗಿದೆ.ಮೋಸದಿಂದ ಪ್ರಿಯತಮೆಯ ಕರೆದೊಯ್ದು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

ನಿನ್ನೆ ಭದ್ರಾ ಕಾಲುವೆಯಲ್ಲಿ ಯುವತಿ ಸ್ವಾತೀ ಶವ ಪತ್ತೆಯಾಗಿದೆ. ತೆರೇನಹಳ್ಳಿಯ ಸ್ವಾತಿ ಹಾಗೂ ಸೂರ್ಯ ನಡುವೆ ಪ್ರೇಮಾಂಕುರವಾಗಿತ್ತು.

ಇಬ್ಬರ ಮದುವೆಗೆ ಯುವತಿ ಸ್ವಾತಿ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ವಿರೋಧ ಇದ್ದರೂ ಕೂಡ ಸ್ವಾತಿಗೆ ಮದುವೆಯಾಗಲು ಸೂರ್ಯ ಕಾಟ ಕೊಟ್ಟಿದ್ದಾನೇ. ಸೆಪ್ಟೆಂಬರ್ 21ರಂದು ಪ್ರಿಯಕರ ಸೂರ್ಯ ಸ್ವಾತಿಯನ್ನು ಕರೆದುಕೊಂಡು ಹೋಗಿದ್ದಾನೆ.

ನಿನ್ನೆ ಸಂಜೆ ಭದ್ರಾ ಕಾಲುವೆಯಲ್ಲಿ ಸ್ವಾತಿಯ ಮೃತ ದೇಹ ಪತ್ತೆಯಾಗಿದೆ. ಯುವತಿ ಸಾವಿನ ಸುತ್ತ ಇದೀಗ ನೂರಾರು ಅನುಮಾನಗಳು ಹುಟ್ಟಿಕೊಂಡಿವೆ.

ಮದುವೆ ವಿಚಾರಕ್ಕೆ ಸೂರ್ಯ ಮತ್ತು ಸ್ವಾತಿ ನಡುವೆ ಗಲಾಟೆ ಆಗಿದೆ. ಸೆಪ್ಟೆಂಬರ್ 21ರಂದು ಪ್ರಿಯಕರ ಸೂರ್ಯ ಮತ್ತು ಪ್ರೇಯಸಿ ಸ್ವಾತಿ ಗಲಾಟೆ ಮಾಡಿಕೊಂಡಿದ್ದಾರೆ.

ಯುವತಿ ಸ್ವಾತಿ ಡಿಗ್ರಿ ಎರಡನೇ ವರ್ಷ ಓದುತ್ತಿದ್ದಳು. ಸ್ವಾತಿಯನ್ನು ಸೂರ್ಯ ಮೋಸದಿಂದ ಕರೆದುಕೊಂಡು ಹೋಗಿದ್ದಾನೆ ಎಂದು ಸೆಪ್ಟೆಂಬರ್ 23 ರಂದು ಭದ್ರಾವತಿ ಠಾಣೆಗೆ ಸ್ವಾತಿ ಪೋಷಕರು ದೂರು ನೀಡಿದ್ದಾರೆ.

ಹಾಗಾಗಿ ಪೋಷಕರು ಪ್ರಿಯಕರ ಸೂರ್ಯನ ಮೇಲೆ ಈ ಒಂದು ಗಂಭೀರವಾದ ಆರೋಪ ಮಾಡಿದ್ದಾರೆ. ಹಿತ ನಿನ್ನೇ ಸ್ವಾತಿ ಶಿವ ಪತ್ತೆ ಆಗುತ್ತಿದ್ದಂತೆ ಅತ್ಯಪ್ರಿಯಕರ ಸೂರ್ಯ ಆತ್ಮಹತ್ಯೆಗೆ ಯತ್ನಿಸಿದ್ದಾನೆ ವಿಷ ಸೇವಿಸಿ ಪ್ರಿಯಕರ ಸೂರ್ಯ ಮಾಡಿದ್ದಾನೆ.

ಸೂರ್ಯ ಮತ್ತು ಆತನ ತಂದೆ ಸ್ವಾಮಿ ವಿರುದ್ಧ ದೂರು ದಾಖಲಾಗಿದ್ದು ಸ್ವಾತಿ ಪೋಷಕರು ಇಬ್ಬರ ವಿರುದ್ಧ ಕೂಡ ದೂರು ದಾಖಲಿಸಿದ್ದಾರೆ ಸದ್ಯ ಭದ್ರಾವತಿ ಪೊಲೀಸರಿಂದ ಸೂರ್ಯ ಮತ್ತು ತಂದೆ ಸ್ವಾಮಿಯನ್ನು ಅರೆಸ್ಟ್ ಮಾಡಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!