ಚಿಕ್ಕೋಡಿ : ತಾಲೂಕಿನ ಯಡೂರ ಗ್ರಾಮದಲ್ಲಿ ಶಾಸಕರಾದ ಶ್ರೀ ಗಣೇಶ ಅಣ್ಣಾ ಹುಕ್ಕೇರಿ ಅವರು 1 ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಶಾಸಕರು ಗ್ರಾಮೀಣ ಭಾಗದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸದಾ ಬದ್ಧನಾಗಿದ್ದು, ಉತ್ತಮ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಗ್ರಾಮಸ್ಥರಿಗೆ ಸುಗಮ ಸಂಚಾರ ಮತ್ತು ಆರೋಗ್ಯಕರ ಪರಿಸರವನ್ನು ಒದಗಿಸುತ್ತದೆ ಎಂದು ಹೇಳಿದರು.

ಈ ವೇಳೆ ಸ್ಥಳೀಯ ಮುಖಂಡರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಯುವ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ರಾಜು ಮುಂಡೆ




