Ad imageAd image

ತಂಬಾಕು ವಿರೋಧಿ ನಿಮಿತ್ತ ಗುಲಾಬಿ ಆಂದೋಲನ ಜಾಥಾ

Bharath Vaibhav
WhatsApp Group Join Now
Telegram Group Join Now

ಸಿರುಗುಪ್ಪ : -ನಗರದ ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಛೇರಿ ಹಾಗೂ ತಂಬಾಕು ನಿಯಂತ್ರಣ ಕೋಶಗಳ ಸಹಯೋಗದಲ್ಲಿ ನಡೆದ ವಿಶ್ವ ತಂಬಾಕು ವಿರೋದಿ ದಿನಾಚರಣೆಯ ನಿಮಿತ್ತ ಗುಲಾಬಿ ಆಂದೋಲನ ಜಾಥಾಕ್ಕೆ ಜೆ.ಎಮ್.ಎಫ್.ಸಿ ನ್ಯಾಯಾಧೀಶರಾದ ಹಾಜಿ ಹುಸೇನ್‌ಸಾಬ್ ಯಾದವಾಡ ಅವರು ಚಾಲನೆ ನೀಡಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಈರಣ್ಣ ಅವರು ಮಾತನಾಡಿ ನಗರದ ಪ್ರಮುಖ ಬೀದಿಗಳಲ್ಲಿ ಜಾಥಾವನ್ನು ನಡೆಸಿ ಸಾರ್ವಜನಿಕ ಸ್ಥಳಗಳಲ್ಲಿನ ದೂಮಪಾನ ನಿಷೇದದ ಕುರಿತು ಮಾಹಿತಿ ನೀಡಿ ಹಾಗೂ ಅದರಿಂದಾಗು ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ಗುಲಾಬಿ ಹೂ ನೀಡುವುದರೊಂದಿಗೆ ಗುಲಾಬಿ ಆಂದೋಲನ ಮಾಡಲಾಗುತ್ತಿದೆಂದು ತಿಳಿಸಿದರು.

ಇದೇ ವೇಳೆ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಖಾಸೀಂ, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಭೀಮರೆಡ್ಡಿ, ನಗರ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಚಂದ್ರಶೇಖರ ಹಾಗೂ ಆಶಾ ಕಾರ್ಯಕರ್ತೆಯರು, ಇನ್ನಿತರ ಸಿಬ್ಬಂದಿಗಳಿದ್ದರು.

ವರದಿ. ಶ್ರೀನಿವಾಸ ನಾಯ್ಕ

WhatsApp Group Join Now
Telegram Group Join Now
Share This Article
error: Content is protected !!