Ad imageAd image

ಬಿಎಸ್ ಪಿ ಪಕ್ಷದ ಅಭ್ಯರ್ಥಿಯಾಗಿ ಅಶೋಕ ಅಪ್ಪುಗೊಳ ಆಯ್ಕೆ

Bharath Vaibhav
WhatsApp Group Join Now
Telegram Group Join Now

ಬೆಳಗಾವಿ:- ಮುಂಬರುವ ಲೋಕಸಭಾ ಚುನಾವಣೆಗೆ ಬಹುಜನ ಸಮಾಜ ಪಾರ್ಟಿ ಪಕ್ಷದ ಅಭ್ಯರ್ಥಿಯನ್ನಾಗಿ ಅಶೋಕ ಅಪ್ಪುಗೊಳ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಸಂಯೋಜಕ ಎಂ ಗೋಪಿನಾಥ ತಿಳಿಸಿದರು.

 

ನಗರದ ಸಾಹಿತ್ಯ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಅಭ್ಯರ್ಥಿ ಅಪ್ಪುಗೊಳ ಸುಮಾರು 36 ವರ್ಷಗಳ ಕಾಲ ಅಂಚೆ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತರಾಗಿದ್ದಾರೆ. ಅವರ ಕುಟುಂಬವು ದಲಿತ, ಹಿಮದುಳಿದ ಸಮಾಜ ಹಾಗೂ ಜನಪರ ಕಾರ್ಯದಲ್ಲಿ ತೊಡಗಿಕೊಂಡಿದೆ.

ಸಮಾಜದ ಏಳಿಗೆಗಾಗಿ ಅಶೋಕ ಅಪ್ಪುಗೊಳ ಅವರನ್ನು ಬಹುಮತದಿಂದ ಆಯ್ಕೆ ಮಾಡಬೇಕೆಂದು ವಿನಂತಿಸಿದರು.ನಂತರ ಬಹುಜನ ಸಮಾಜ ಪಾರ್ಟಿ ಪಕ್ಷದ ಅಭ್ಯರ್ಥಿ ಅಶೋಕ ಅಪ್ಪುಗೊಳ ಮಾತನಾಡಿ ರಾಷ್ಟ್ರೀಯ ಪಕ್ಷಗಾಳದ ಕಾಂಗ್ರೆಸ್ ಮತ್ತು ಬಿಜೆಪಿ ಕುರುಬ ಸಮಾಜಕ್ಕೆ ಅನ್ಯಾಯ ಮಾಡುತ್ತಿವೆ. ಆದ್ದರಿಂದ ಸಮಾಜದ ಅಭಿವೃದ್ದಿಗೆ ನಾನು ಅಂಚೆ ಇಲಾಖೆಯ ವೃತ್ತಿಗೆ ರಾಜಿನಾಮೆ ನೀಡಿ ಬಂದಿದ್ದೆನೆ ಎಂದರು.

ವರದಿ: ಪ್ರತೀಕ ಚಿಟಗಿ

WhatsApp Group Join Now
Telegram Group Join Now
Share This Article
error: Content is protected !!