Ad imageAd image

ದೈನಂದಿನ ಕೆಲಸಕ್ಕೆ ಮತ್ತೆ ಹಾಜರಾಗುತ್ತಿದ್ದೇನೆ : ಎಎಸ್ಪಿ  ಬರಮನಿ ಸ್ಪಷ್ಟನೆ

Bharath Vaibhav
ದೈನಂದಿನ ಕೆಲಸಕ್ಕೆ ಮತ್ತೆ ಹಾಜರಾಗುತ್ತಿದ್ದೇನೆ : ಎಎಸ್ಪಿ  ಬರಮನಿ ಸ್ಪಷ್ಟನೆ
WhatsApp Group Join Now
Telegram Group Join Now

ಧಾರವಾಡ : ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯ ಹೆಚ್ಚುವರಿ ಎಸ್ಪಿ ಆಗಿದ್ದ ನಾರಾಯಣ ಭರಮನಿ ಅವರಿಗೆ ಕಪಾಳಮೋಕ್ಷಕ್ಕೆ ಮುಂದಾಗಿದ್ದರು. ಇದೇ ವಿಚಾರವಾಗಿ ನಾರಾಯಣ ಭರಮನಿ ಸ್ವಯಂ ನಿವೃತ್ತಿಗೆ ಮುಂದಾಗಿ ಪತ್ರ ಸಹ ಬರೆದಿದ್ದರು.

ಇದೀಗ ನಾರಾಯಣ ಬರಮಣಿ ಅವರು ನಾನು ದೈನಂದಿನ ಕೆಲಸಕ್ಕೆ ಮತ್ತೆ ಹಾಜರಾಗುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಧಾರವಾಡ ಎಎಸ್ಪಿ ನಾರಾಯಣ ಬರಮನಿ ರಾಜೀನಾಮೆ ವಿಚಾರವಾಗಿ, ನಾನು ಶಿಸ್ತಿನ ಇಲಾಖೆಯಲ್ಲಿ ಇದ್ದೇನೆ. ನನ್ನ ಭಾವನೆಗಳನ್ನು ಇಲಾಖೆ ಮೇಲಾಧಿಕಾರಿಗಳಿಗೆ ತಿಳಿಸಿದ್ದೇನೆ. ಮೇಲಾಧಿಕಾರಿಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರಹ ಸಚಿವ ಜಿ ಪರಮೇಶ್ವರ್ ರವರು ನನ್ನ ಜೊತೆಗೆ ಮಾತನಾಡಿದ್ದಾರೆ.

ಈಗ ನಾನು ದೈನಂದಿನ ಕೆಲಸಕ್ಕೆ ಹಾಜರಾಗುತ್ತಿದ್ದೇನೆ ರಾಜೀನಾಮೆ ಅಂಗೀಕಾರ ಕುರಿತು ಸರ್ಕಾರ ನಿರ್ಧರಿಸುತ್ತದೆ ನಾನೀಗ ದೈನಂದಿನ ಕೆಲಸಕ್ಕೆ ಹಾಜರಾಗುತ್ತೇನೆ ಎಂದು ಧಾರವಾಡದಲ್ಲಿ ಎಎಸ್ಪಿ ನಾರಾಯಣ ಭರಮಣಿ ಹೇಳಿಕೆ ನೀಡಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!