Ad imageAd image

ಲೇಖಕಿ ಬಾನು ಮುಷ್ತಾಕ್ ಅವರಿಗೆ ಅಭಿನಂದನೆಗಳ ಮಹಾಪೂರ

Bharath Vaibhav
ಲೇಖಕಿ ಬಾನು ಮುಷ್ತಾಕ್ ಅವರಿಗೆ ಅಭಿನಂದನೆಗಳ ಮಹಾಪೂರ
WhatsApp Group Join Now
Telegram Group Join Now

ಕನ್ನಡದ ಪ್ರಸಿದ್ಧ ಲೇಖಕಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಬಾನು ಮುಷ್ತಾಕ್ ಅವರು ಅಂತಾರಾಷ್ಟ್ರೀಯ ‘ಬೂಕರ್’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅವರ ಕಥಾ ಸಂಕಲನ ‘ಹಾರ್ಟ್ ಲ್ಯಾಂಪ್’ (ಅನುವಾದಿತ) ಲಂಡನ್‌ನಲ್ಲಿ ಪ್ರತಿಷ್ಠಿತ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದು, ಇದು ಕನ್ನಡಕ್ಕೆ ಸಿಕ್ಕ ಮೊದಲ ಪ್ರಶಸ್ತಿಯಾಗಿದೆ. ಬಾನು ಮುಷ್ತಾಕ್ ಅವರು ಬರೆದ ಹಸೀನಾ ಮತ್ತು ಇತರ ಕತೆಗಳು ಕೃತಿಯನ್ನು ದೀಪಾ ಭಾಸ್ತಿ ಇಂಗ್ಲಿಷ್​ಗೆ ಅನುವಾದಿಸಿದ್ದರು. ಪ್ರಶಸ್ತಿ ಗೆದ್ದ ಹಿನ್ನೆಲೆಯಲ್ಲಿ, ಲೇಖಕಿ ಬಾನು ಮುಷ್ತಾಕ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.

ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್​​ಕುಮಾರ್ ಕೂಡಾ ತಮ್ಮ ಅಧಿಕೃತ ಸೋಷಿಯಲ್​ ಮೀಡಿಯಾ ಪೋಸ್ಟ್​ ಮೂಲಕ ತಮ್ಮ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಶಿವರಾಜ್​​ಕುಮಾರ್ಎಕ್ಸ್​​​​ ಪೋಸ್ಟ್​: ”ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಹಾಗೂ ದೀಪಾ ಭಾಸ್ತಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಕನ್ನಡ ಸಾಹಿತ್ಯವನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸಿ, ವಿಶ್ವದ ಗಮನ ಸೆಳೆದ ನಿಮ್ಮ ಸಾಧನೆ, ಕನ್ನಡ ಸಾಹಿತ್ಯಕ್ಕೆ ಹಾಗೂ ಸಾಂಸ್ಕೃತಿಕ ಪರಂಪರೆಗೆ ಮಹತ್ತರವಾದ ಕೊಡುಗೆ. ಈ ಗೌರವ ಕನ್ನಡ ಸಾಹಿತ್ಯ ಲೋಕಕ್ಕೆ ಮತ್ತಷ್ಟು ಬಲ ನೀಡಲಿ ಎಂದು ಆಶಿಸುತ್ತೇನೆ”.

ಸುಧಾ ಮೂರ್ತಿ ಪ್ರಶಂಸೆ: ಶಿವಣ್ಣನ ಜೊತೆಗೆ‌ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಕೂಡಾ ಬಾನು ಮುಷ್ತಾಕ್ ಅವರ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಬಾನು ಮುಷ್ತಾಕ್ ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಬಂದಿದ್ದು, ಇದು ಪ್ರತಿಯೊಬ್ಬ ಕನ್ನಡಿಗ ಮಹಿಳೆಯರಿಗೆ ಡಬಲ್ ಗೆಲುವು ಎಂದಿದ್ದಾರೆ‌.

 

WhatsApp Group Join Now
Telegram Group Join Now
Share This Article
error: Content is protected !!