Ad imageAd image

ಜಿಪಂ, ತಾಪಂ ಚುನಾವಣೆಗೆ ರಾಜ್ಯ ಸರ್ಕಾರ ದೃಢ ನಿಲುವು : ಬೈರತಿ ಸುರೇಶ್

Bharath Vaibhav
ಜಿಪಂ, ತಾಪಂ ಚುನಾವಣೆಗೆ ರಾಜ್ಯ ಸರ್ಕಾರ ದೃಢ ನಿಲುವು : ಬೈರತಿ ಸುರೇಶ್
WhatsApp Group Join Now
Telegram Group Join Now

ಬೆಳಗಾವಿ ಸುವರ್ಣಸೌಧ : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಕೇವಲ ಎರಡು ವರ್ಷಗಳಲ್ಲಿ ತಾಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಗಟ್ಟಿ ನಿರ್ಧಾರ ಮಾಡಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಪ್ರತಿಪಕ್ಷಗಳಿಗೆ ಮಾರುತ್ತರ ನೀಡಿದ್ದಾರೆ.

ಮಂಗಳವಾರ ವಿಧಾನಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಪ್ರತಿಪಕ್ಷ ಬಿಜೆಪಿ ಸದಸ್ಯರು ರಾಜ್ಯ ಸರ್ಕಾರ ಚುನಾವಣೆ ನಡೆಸಲು ವಿಳಂಬ ಮಾಡುತ್ತಿದೆ ಎಂದು ಆಕ್ಷೇಪಿಸಿದಾಗ ಎದ್ದು ನಿಂತ ಸಚಿವರು, ಈ ಹಿಂದೆ ಆರೇಳು ವರ್ಷಗಳಿಂದ ಅಧಿಕಾರ ನಡೆಸಿದ ಬಿಜೆಪಿ ಚುನಾವಣೆ ನಡೆಸದೇ ಕಾಲಹರಣ ಮಾಡುತ್ತಾ ಮತ್ತು ಈ ಬಗ್ಗೆ ಯಾವುದೇ ಧ್ವನಿ ಎತ್ತಿರಲಿಲ್ಲ.

ಯಾವುದೇ ತಾಲೂಕು, ಜಿಲ್ಲಾ ಪಂಚಾಯ್ತಿ ಅಥವಾ ಪಾಲಿಕೆಗಳಿಗೆ ಚುನಾವಣೆಯನ್ನೇ ನಡೆಸುವ ಧೈರ್ಯ ತೋರಲಿಲ್ಲ.

ಆದರೆ, ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಎರಡು ವರ್ಷಗಳಲ್ಲಿ ತಾಲೂಕು, ಜಿಲ್ಲಾ ಪಂಚಾಯ್ತಿ ಮತ್ತು ಪಾಲಿಕೆಗಳಿಗೆ ಚುನಾವಣೆ ನಡೆಸಲು ಮುಂದಾಗಿದೆ ಎಂದು ತಿರುಗೇಟು ನೀಡಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!